ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲವ್ ಜಿಹಾದ್ ಬಗ್ಗೆ ಜಾಗೃತಿ ಅಗತ್ಯ : ಈಶ್ವರಪ್ಪ

By Staff
|
Google Oneindia Kannada News

KS Eshwarappa
ಶಿವಮೂಗ್ಗ, ಜ. 4 : ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಧರ್ಮದ ಹೆಣ್ಣುಮಕ್ಕಳನ್ನು ಮತಾಂತರಗೊಳಿಸುತ್ತಿರುವ ಪ್ರಕರಣವನ್ನು ದಿನೇದಿನೇ ಹೆಚ್ಚುತ್ತಿವೆ ಎಂದು ಇಂದನ ಸಚಿವ ಕೆಎಸ್ ಈಶ್ವರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಶಿವಪ್ಪ ನಾಯಕ ವೃತ್ತದ ಬಳಿ ಇರುವ ಸೇಂಟ್ ಥಾಮಸ್ ಚರ್ಚ್ ಉದ್ಘಾಟನಾ ಸಮಾರಂಭ ನಂತರ ಮಾತನಾಡಿದ ಅವರು, ಕೇರಳ ಹಾಗೂ ಕರ್ನಾಟಕದಲ್ಲಿ ನಡೆಯುತ್ತಿರುವ ಲವ್ ಜಿಹಾದ್ ಆತಂಕಕಾರಿ ಬೆಳವಣಿಗೆ ಎಂದರು. ನಿರಂತರವಾಗಿ ಹಿಂದೂ ಹಾಗೂ ಕ್ರಿಶ್ಚಿಯನ್ ಧರ್ಮದ ಹೆಣ್ಣುಮಕ್ಕಳಿಗೆ ಆಸೆ ಆಮಿಷ ತೋರಿಸಿ ಬಲಿಪಶು ಮಾಡಲಾಗುತ್ತಿದೆ ಎಂದರು.

ದೇಶದಲ್ಲಿ ವಿವಿಧ ಧರ್ಮ ಜಾತಿಗಳಿವೆ. ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮಲ್ಲಿದೆ. ವಿವಿಧತೆಯಲ್ಲಿ ಏಕತೆಯಿದೆ. ಈ ವಿಷಯದಲ್ಲಿ ಭಾರತ ಪ್ರಪಂಚಕ್ಕೆ ಮಾದರಿ ದೇಶ. ಇಂತಹ ವಾತಾವರಣದಲ್ಲಿ ಕೆಲ ಕಿಡಿಗೇಡಿಗಳು ಸಮಾಜದಲ್ಲಿರುವ ಶಾಂತಿ ಭಗ್ನಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ದುಷ್ಕರ್ಮಿಗಳ ಬಗ್ಗೆ ಜಾಗ್ರತೆಯಿಂದ ಇರಬೇಕು ಎಂದು ಈಶ್ವರಪ್ಪ ಕಿವಿಮಾತು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X