ಚಳಿಯ ಹೊಡೆತಕ್ಕೆ ಉತ್ತರ ಪ್ರದೇಶ ತತ್ತರ, 125 ಸಾವು

ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ್ ರಾಜ್ಯಗಳಲ್ಲಿ ಉಂಟಾಗಿರುವ ಚಳಿಗೆ ಜನತೆ ತತ್ತರಿಸಿಹೋಗಿದೆ. ಮಧ್ಯಾಹ್ನವಾದರೂ ಮಂಜು ಕವಿದು ಎದುರಿರುವವರು ಕಾಣದ ಸ್ಥಿತಿಯನ್ನು ನಿರ್ಮಾಣವಾಗಿದ್ದು, ಕಾಯಿಲೆ ಬಿದ್ದಿರುವ ವ್ಯಕ್ತಿಗಳು, ವೃದ್ಧರು ಪರಿಸ್ಥಿತಿಯಂತೂ ದೇವರಿಗೆ ಪ್ರೀತಿ ಎನ್ನುವಂತಾಗಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ. 8 ಬಿಹಾರ್ ಹಾಗೂ ಇಬ್ಬರು ಹರಿಯಾಣದಲ್ಲಿ ಮೃತಪಟ್ಟಿದ್ದಾರೆ. ಚಳಿಗೆ ತತ್ತರಿಸಿರುವ ಬಿಹಾರ್ ಮತ್ತು ಪಂಜಾಬನಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜಾ ಘೋಷಿಸಲಾಗಿದೆ. ರಾಜಸ್ಥಾನದಲ್ಲಿ ಇದೇ ವಾತಾವರಣ ಮುಂದುವರೆದಿದ್ದು, ತಾಪಮಾನ ಕೇವಲ 7 ಡಿಗ್ರಿ ಸೆಲ್ಸಿಯಸ್ ಇದೆ. ಉಳಿದ ರಾಜ್ಯಗಳಲ್ಲಿ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಟಿಲ್ಲ. ಮುಂದಿನ 24 ಗಂಟೆಗಳ ಕಾಲವೂ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications