ಗೀತಾ ನಾಗಭೂಷಣ ಗದಗ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರು ಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೀತಾ ನಾಗಭೂಷಣ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಫೆಬ್ರವರಿ 19, 20 ಮತ್ತು 21 ರಂದು ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗದಗನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ದಲಿತ ಮತ್ತು ಬಂಡಾಯ ಸಾಹಿತ್ಯ ಸಂವೇದನಾಶೀಲ ಕಥೆಗಾರ್ತಿ ಗೀತಾ ನಾಗಭೂಷಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪರಿಷತ್ ನ ಕಾರ್ಯದರ್ಶಿ ಪುಂಡಲೀಕ್ ಹಾಲಂಬಿ ತಿಳಿಸಿದರು.
ಕುಮಾರವ್ಯಾಸ ತವರೂರಿನಲ್ಲಿ ನಡೆಯುತ್ತಿರುವ ಸಾಹಿತ್ಯ ಜಾತ್ರೆಯ ಅಧ್ಯಕ್ಷ ಸ್ಥಾನಕ್ಕೆ ಗೀತಾ ನಾಗಭೂಷಣ ಆಯ್ಕೆ ಅತ್ಯಂತ ಸಂತಸ ತಂದಿದೆ. ಉತ್ತರ ಕರ್ನಾಟಕದಲ್ಲಿ ಸೊಗಡು ಅವರ ಕಥೆಗಳಲ್ಲಿ ಹಾಸುಹೊಕ್ಕಾಗಿವೆ. ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಅನೇಕ ಆಯ್ಕೆಗಳಿದ್ದರೂ ಗೀತಾ ನಾಗಭೂಷಣ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಚಂದ್ರಶೇಖರ್ ಪಾಟೀಲ್ ಹೇಳಿದರು. 1961 ರಲ್ಲಿ ಗದಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಕೆ ಜಿ ಕುಂದಣಗಾರ ವಹಿಸಿಕೊಂಡಿದ್ದನ್ನು ಚಂಪಾ ಸ್ಮರಿಸಿಕೊಂಡರು.
ಗೀತಾ ನಾಗಭೂಷಣ್ ಅವರ ಸಂಕ್ಷಿಪ್ತ ಪರಿಚಯ
ಗೀತಾ ನಾಗಭೂಷಣ ಅವರ 'ಬದುಕು' (2001) ವಾಸ್ತವ ಮಾರ್ಗದ ಇನ್ನೊಂದು ಮಹತ್ವದ ಕಾದಂಬರಿ. 2004ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಗಳಿಸಿದ 'ಬದುಕು' ಹೈದರಾಬಾದ್ ಕರ್ನಾಟಕ ಭಾಗದ ಕೊಳಗೇರಿಯ ಕೆಳವರ್ಗದ ಜನರ ಬದುಕನ್ನು ತುಂಬ ಸಮರ್ಥವಾಗಿ ನಿರೂಪಿಸುವ ಕೃತಿ. ಗೀತಾ ನಾಗಭೂಷಣ ಅವರ ಹಸಿಮಾಂಸ ಮತ್ತು ಹದ್ದುಗಳು ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ.
* ಹುಟ್ಟೂರು : ಗುಲ್ಬರ್ಗ ಜಿಲ್ಲೆಯ ಸಾವಳಗಿ ಗ್ರಾಮ
* ಗಂಗಾಮತಸ್ಥ ಸಮುದಾಯಕ್ಕೆ ಸೇರಿದ ದಲಿತ ಮಹಿಳೆ
* 27 ಕಾದಂಬರಿಗಳನ್ನು ರಚಿಸಿದವರು
* ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆಯಾಗಿದ್ದರು.
* ನಿವೃತ್ತ ಪ್ರಾಂಶುಪಾಲರು(69)
* ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ನಾಡೋಜ ಪ್ರಶಸ್ತಿ
* ಹೈದರಾಬಾದ್ ಕರ್ನಾಟಕದ ಬದುಕನ್ನು ಅದರ ಬಿಸಿಯೊಂದಿಗೆ ಮುಟ್ಟಿಸಿದ ದಿಟ್ಟ ಲೇಖಕಿ
* ಹಸಿಮಾಂಸ ಮತ್ತು ಹದ್ದುಗಳು ಕೃತಿ ಮರಾಠಿ ಭಾಷೆಗೆ ಅನುವಾದ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications