ಬುರ್ಜ್ ಖಲೀಫಾದಲ್ಲಿ ಕನ್ನಡ ಡಿಂಡಿಮ

ಅಬುದಾಬಿಯಲ್ಲಿ ನೆಲೆಸಿರುವ ಶೆಟ್ಟಿ ನ್ಯೂ ಮೆಡಿಕಲ್ ಸೆಂಟರ್ ಸಮೂಹ ಅಸ್ಪತ್ರೆಗಳ ಸಂಸ್ಥಾಪಕರು. ಎಎಂಸಿ ಸಮೂಹದ ಮೂಲಕ ಪ್ರಸಿದ್ದಿ ಪಡೆದವರು. ವಿಶ್ವದ ಅತ್ಯಂತ ಪ್ರತಿಷ್ಠಿತ ಕಟ್ಟಡದಲ್ಲಿ ಎರಡು ಮಹಡಿಗಳನ್ನು ಖರೀದಿಸಿ ಕೋಟ್ಯಾಧಿಪತಿಯ ಹೊಸ ವಿಳಾಸವೀಗ 100, ಬುರ್ಜ್ ಖಲೀಫಾ. ಕಳೆದ ಸೋಮವಾರ ಬುರ್ಜ್ ಖಲೀಫಾ ಉದ್ಘಾಟನೆಗೊಂಡಿದೆ.
169 ಮಹಡಿಗಳನ್ನು ಹೊಂದಿದ ಬುರ್ಜ್ ಖಲೀಫಾ ಕಟ್ಟಡಕ್ಕೀಗ ವಿಶ್ವದ ಅತಿ ಎತ್ತರದ ಕಟ್ಟಡ ಎಂಬ ಬಿರುದು. ಎತ್ತರ 2717 ಅಡಿ. ಕಟ್ಟಲು ತೆಗೆದುಕೊಂಡ ಸಮಯ 5 ವರ್ಷ. 7500 ಕೋಟಿ ರುಪಾಯಿಗಳಷ್ಟು ಖರ್ಚು. 12 ಸಾವಿರ ಕೂಲಿ ಕಾರ್ಮಿಕರಿಂದ ಕೆಲಸ. ಕಟ್ಟಡದೊಳಗಿರುವ ಕಬ್ಬಿಣದ ಪ್ರಮಾಣ 31,400 ಟನ್. ತಳಪಾಯದ ವಿಸ್ತಾರ 17 ಫುಟ್ ಬಾಲ್ ಅಂಗಣಗಳಷ್ಟು. ತುತ್ತತುದಿಯಲ್ಲಿರುವುದು ಮಸೀದಿ. 144 ನೇ ಮಹಡಿಯಲ್ಲಿ ವಿಶ್ವದ ಎತ್ತರ ನೈಟ್ ಕ್ಲಬ್, 76ನೇ ಮಹಡಿಯಲ್ಲಿ ವಿಶ್ವದ ಎತ್ತರದ ಈಜು ಕೊಳ. 900 ಸ್ಟುಡಿಯೋಗಳು. 114 ಐಷಾರಾಮಿ ಅಪಾರ್ಟ್ ಮೆಂಟ್ ಗಳು. ದುಬಾರಿ ಹೋಟೆಲ್ ಗಳು. 3,000 ಕಾರುಗಳಿಗೆ ಪಾರ್ಕಿಂಗ್ ಸೌಲಭ್ಯ ಈ ಬುರ್ಜ್ ಖಲೀಫಾದಲ್ಲಿದೆ.
ಬಿ.ಆರ್ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆ ಕಾಪು ಸಮೀಪದ ಬಾವಗತ್ ನವರು. 1972 ರಲ್ಲಿ ಕ್ಲಿನಿಕಲ್ ಫಾರ್ಮಸಿಯಲ್ಲಿ ಪದವಿ ಪಡೆದ ನಂತರ ಉದ್ಯೋಗ ಅರಸಿ ಅಬುದಾಬಿಗೆ ತೆರಳಿ ನ್ಯೂ ಮೆಡಿಕಲ್ ಸೆಂಟರ್ ಎಂಬ ಕ್ಲಿನಿಕ್ ಆರಂಭಿಸಿದ ಹಂತಹಂತವಾಗಿ ಶೆಟ್ಟಿ ಬೆಳೆಯುತ್ತಾ ಹೋದರು. ಇದೀಗ ಶೆಟ್ಟಿ ದುಬೈ ಸರಕಾರದ ವಿತ್ತ ಇಲಾಖೆಯ ಸಲಹಾ ಮಂಡಳಿಯ ಸದಸ್ಯ ಕೂಡ. 2009ರ ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ಮಂಗಳೂರು ವಿವಿ ಡಾಕ್ಟರೇಟ್ ಪುರಸ್ಕಾರ ಸೇರಿದಂತೆ ನೂರಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಪತ್ನಿ ಚಂದ್ರಕುಮಾರಿ, ಒಬ್ಬ ಮಗ ಹಾಗೂ ಮೂವರು ಹೆಣ್ಣುಮಕ್ಕಳೊಂದಿಗೆ ಶೆಟ್ಟಿ ಸಂತೃಪ್ತಿ ಜೀವನ ನಡೆಸುತ್ತಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications