ಮಂಗಳೂರಿನಲ್ಲಿ ಶೀಘ್ರವೇ ಸೈಬರ್ ಲ್ಯಾಬ್ ಸ್ಥಾಪನೆ

ಮಾಹಿತಿಯ ಸುರಕ್ಷತೆ, ಗೌಪ್ಯತೆ, ಸಮಗ್ರತೆ ಹಾಗೂ ಲಭ್ಯತೆ ಮಾಹಿತಿ ತಂತ್ರಜ್ಞಾನ ಉದ್ದಿಮೆಗಳ ಮೂಲ ತತ್ವಗಳು. ಇವುಗಳಲ್ಲಿ ಒಂದು ಅಂಶಕ್ಕೆ ಧಕ್ಕೆಯಾದರೂ ಸಹ ನಷ್ಟ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಐಟಿ ಕಾಯಿದೆ ಒಂದು ಮಹತ್ವದ ಹೆಜ್ಜೆ. 2009ರಲ್ಲಿ ಈ ಕಾಯ್ದೆಗೆ ಮಾಡಿರುವ ತಿದ್ದುಪಡಿಗಳೂ ಪ್ರಸ್ತುತವಾಗಿವೆ ಎಂದು ಅಖಿಲಾ ಅಭಿಪ್ರಾಯಪಟ್ಟರು.
ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಮನೋಳಿ ಅವರು ಮಾತನಾಡಿ, ಬೆಂಗಳೂರಿನ ಸೈಬರ್ ಲ್ಯಾಬ್ನ ಕಾರ್ಯನಿರ್ವಹಣೆ ಬಗೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಮಂಗಳೂರಿನಲ್ಲಿ ಇನ್ನೊಂದು ಸೈಬರ್ ಲ್ಯಾಬ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಭವಿಷ್ಯದ ಯುದ್ಧ ಸೈಬರ್ ಯುದ್ಧವಾಗಿರುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದು, ಇದಕ್ಕೆ ಪೂರಕವಾಗಿ ಸೈಬರ್ ಭಯೋತ್ಪಾದನೆಯೂ ನಮ್ಮ ಸುತ್ತಮುತ್ತ ಬೆಳೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ, ನಾಸ್ಕಾಂ ಹಾಗೂ ಐಟಿ ಸಂಸ್ಥೆಗಳು ಜೊತೆಯಾಗಿ ಸೈಬರ್ ಅಪರಾಧಗಳ ಹುಟ್ಟಡಗಿಸುವ ಬಗ್ಗೆ ಚಿಂತನೆ ನಡೆಸಿ, ಕಾರ್ಯಪ್ರವೃತ್ತರಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರವು "ಸಿಂಗಲ್ ಸ್ಟಾಪ್ ಸರ್ವಿಸ್ ಪ್ರೊವೈಡರ್"ನ್ನು ಸ್ಥಾಪಿಸಲು ಸಿದ್ಧವಿದೆ. ಮೂಲಸೌಲಭ್ಯ ಮತ್ತು ಆರ್ಥಿಕ ನೆರವನ್ನು ಇದಕ್ಕೆ ಸರ್ಕಾರವೇ ಒದಗಿಸಲಿದೆ. ತಾಂತ್ರಿಕ ನೆರವನ್ನು ನಾಸ್ಕಾಂ ನೀಡಿದರೆ, ಐಟಿ ಸಂಸ್ಥೆಗಳು ಇದನ್ನು ಮುನ್ನಡೆಸಲು ಮುಂದೆ ಬರಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಐಡಿ ಡಿಜಿಪಿ ಡಾ.ಡಿ.ವಿ. ಗುರುಪ್ರಸಾದ್ ಅವರು ಮಾತನಾಡಿ, ಸೈಬರ್ ಅಪರಾಧಗಳ ಬಗ್ಗೆ ಪೊಲೀಸರಲ್ಲಿ, ಜನಸಾಮಾನ್ಯರಲ್ಲಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳ ಅಗತ್ಯವಿದೆ. ಪೊಲೀಸರಿಗೆ ಸೈಬರ್ ಅಪರಾಧ ಪ್ರಕರಣಗಳ ತನಿಖೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ಐಟಿ ಉದ್ದಿಮೆಗಳು ನೆರವಾಗಬೇಕು ಎಂದು ಮನವಿ ಮಾಡಿದರು. ಸೈಬರ್ ಅಪರಾಧಗಳ ಬಗ್ಗೆ ಜನಸಾಮಾನ್ಯರಲ್ಲಿರುವ ಅಜ್ಞಾನದ ಕುರಿತು ನಿದರ್ಶನಗಳೊಂದಿಗೆ ವಿವರಿಸಿದ ಅವರು, ಈ ಅಪರಾಧಗಳಿಗೆ ತುತ್ತಾದವರಿಗೂ ಎಷ್ಟೋ ಬಾರಿ ಇದರ ಅರಿವಿರುವುದಿಲ್ಲ ಎಂದು ತಿಳಿಸಿದರು. ಇ-ಆಡಳಿತವನ್ನು ಜಾರಿಗೆ ತರುತ್ತಿರುವ ಸರ್ಕಾರವೂ ಮಾಹಿತಿ ಸೋರಿಕೆ ಬಗ್ಗೆ ಜಾಗರೂಕತೆ ವಹಿಸಬೇಕು ಎಂದು ಅವರು ಸಲಹೆ ನೀಡಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications