ಮಂಗಳೂರಿನಲ್ಲಿ ಶೀಘ್ರವೇ ಸೈಬರ್ ಲ್ಯಾಬ್ ಸ್ಥಾಪನೆ

ಮಾಹಿತಿಯ ಸುರಕ್ಷತೆ, ಗೌಪ್ಯತೆ, ಸಮಗ್ರತೆ ಹಾಗೂ ಲಭ್ಯತೆ ಮಾಹಿತಿ ತಂತ್ರಜ್ಞಾನ ಉದ್ದಿಮೆಗಳ ಮೂಲ ತತ್ವಗಳು. ಇವುಗಳಲ್ಲಿ ಒಂದು ಅಂಶಕ್ಕೆ ಧಕ್ಕೆಯಾದರೂ ಸಹ ನಷ್ಟ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಐಟಿ ಕಾಯಿದೆ ಒಂದು ಮಹತ್ವದ ಹೆಜ್ಜೆ. 2009ರಲ್ಲಿ ಈ ಕಾಯ್ದೆಗೆ ಮಾಡಿರುವ ತಿದ್ದುಪಡಿಗಳೂ ಪ್ರಸ್ತುತವಾಗಿವೆ ಎಂದು ಅಖಿಲಾ ಅಭಿಪ್ರಾಯಪಟ್ಟರು.
ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಮನೋಳಿ ಅವರು ಮಾತನಾಡಿ, ಬೆಂಗಳೂರಿನ ಸೈಬರ್ ಲ್ಯಾಬ್ನ ಕಾರ್ಯನಿರ್ವಹಣೆ ಬಗೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಮಂಗಳೂರಿನಲ್ಲಿ ಇನ್ನೊಂದು ಸೈಬರ್ ಲ್ಯಾಬ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಭವಿಷ್ಯದ ಯುದ್ಧ ಸೈಬರ್ ಯುದ್ಧವಾಗಿರುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದು, ಇದಕ್ಕೆ ಪೂರಕವಾಗಿ ಸೈಬರ್ ಭಯೋತ್ಪಾದನೆಯೂ ನಮ್ಮ ಸುತ್ತಮುತ್ತ ಬೆಳೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ, ನಾಸ್ಕಾಂ ಹಾಗೂ ಐಟಿ ಸಂಸ್ಥೆಗಳು ಜೊತೆಯಾಗಿ ಸೈಬರ್ ಅಪರಾಧಗಳ ಹುಟ್ಟಡಗಿಸುವ ಬಗ್ಗೆ ಚಿಂತನೆ ನಡೆಸಿ, ಕಾರ್ಯಪ್ರವೃತ್ತರಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರವು "ಸಿಂಗಲ್ ಸ್ಟಾಪ್ ಸರ್ವಿಸ್ ಪ್ರೊವೈಡರ್"ನ್ನು ಸ್ಥಾಪಿಸಲು ಸಿದ್ಧವಿದೆ. ಮೂಲಸೌಲಭ್ಯ ಮತ್ತು ಆರ್ಥಿಕ ನೆರವನ್ನು ಇದಕ್ಕೆ ಸರ್ಕಾರವೇ ಒದಗಿಸಲಿದೆ. ತಾಂತ್ರಿಕ ನೆರವನ್ನು ನಾಸ್ಕಾಂ ನೀಡಿದರೆ, ಐಟಿ ಸಂಸ್ಥೆಗಳು ಇದನ್ನು ಮುನ್ನಡೆಸಲು ಮುಂದೆ ಬರಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಐಡಿ ಡಿಜಿಪಿ ಡಾ.ಡಿ.ವಿ. ಗುರುಪ್ರಸಾದ್ ಅವರು ಮಾತನಾಡಿ, ಸೈಬರ್ ಅಪರಾಧಗಳ ಬಗ್ಗೆ ಪೊಲೀಸರಲ್ಲಿ, ಜನಸಾಮಾನ್ಯರಲ್ಲಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳ ಅಗತ್ಯವಿದೆ. ಪೊಲೀಸರಿಗೆ ಸೈಬರ್ ಅಪರಾಧ ಪ್ರಕರಣಗಳ ತನಿಖೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ಐಟಿ ಉದ್ದಿಮೆಗಳು ನೆರವಾಗಬೇಕು ಎಂದು ಮನವಿ ಮಾಡಿದರು. ಸೈಬರ್ ಅಪರಾಧಗಳ ಬಗ್ಗೆ ಜನಸಾಮಾನ್ಯರಲ್ಲಿರುವ ಅಜ್ಞಾನದ ಕುರಿತು ನಿದರ್ಶನಗಳೊಂದಿಗೆ ವಿವರಿಸಿದ ಅವರು, ಈ ಅಪರಾಧಗಳಿಗೆ ತುತ್ತಾದವರಿಗೂ ಎಷ್ಟೋ ಬಾರಿ ಇದರ ಅರಿವಿರುವುದಿಲ್ಲ ಎಂದು ತಿಳಿಸಿದರು. ಇ-ಆಡಳಿತವನ್ನು ಜಾರಿಗೆ ತರುತ್ತಿರುವ ಸರ್ಕಾರವೂ ಮಾಹಿತಿ ಸೋರಿಕೆ ಬಗ್ಗೆ ಜಾಗರೂಕತೆ ವಹಿಸಬೇಕು ಎಂದು ಅವರು ಸಲಹೆ ನೀಡಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications