ಬಿಬಿಎಂಪಿ ಚುನಾವಣೆ ಸುಪ್ರಿಂಕೋರ್ಟ್ ಅಸ್ತು

ವಿಭಾಗೀಯ ಪೀಠದ ತೀರ್ಪು ಪ್ರಶ್ನಿಸಿ ವಸುಧಾ ಮತ್ತು ಇತರ ಏಳು ಮಂದಿ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆಜಿ ಬಾಲಕೃಷ್ಣನ್ ಮತ್ತು ನ್ಯಾಯಮೂರ್ತಿ ಬಿಎಸ್ ಚವಾಣ್ ಅವರನ್ನೊಳಗೊಂಡ ಪೀಠವು ಇನ್ನು ಚುನಾವಣೆ ಮುಂದೂಡಲು ಸಾಧ್ಯವಿಲ್ಲ. ಈಗ ಪ್ರಕಟಿಸಿರುವ ವೇಳಾಪಟ್ಟಿಯಂತೆ ಚುನಾವಣೆ ಪ್ರಕ್ರಿಯೆ ನಡೆಯಬೇಕು. ರಾಜ್ಯ ಸರಕಾರದ ಮೀಸಲು ಕ್ರಮದಲ್ಲಿ ಚುನಾವಣೆ ನಡೆದರೆ ತಪ್ಪಿಲ್ಲ ಎಂದು ಸುಪ್ರಿಂಕೋರ್ಟ್ ಅಭಿಪ್ರಾಯಪಟ್ಟಿದೆ.
ಪಾಲಿಕೆ ಚುನಾವಣೆಯನ್ನು ಪುನಃ ಮುಂದೂಡಲು ಮತ್ತು ಪರಿಶಿಷ್ಟ ಜಾತಿ, ಪಂಗಡಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೊಂದು ವಾರ್ಡ್ ನಿಗದಿಪಡಿಸುವ ಬದಲಾಗಿ ಇಡೀ ಬೆಂಗಳೂರು ನಗರವನ್ನೇ ಘಟಕವಾಗಿ ಪರಿಗಣಿಸಿ ಮೀಸಲಾತಿ ನೀತಿ ಅನ್ವಯಿಸುವಂತೆ ನಿರ್ದೇಶನ ನೀಡಲು ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿತು. ಇಡೀ ಬೆಂಗಳೂರು ನಗರವನ್ನು ಒಂದು ಘಟಕವಾಗಿ ಪರಿಗಣಿಸಿ ಮೀಸಲಾತಿ ನೀಡಬೇಕು ಎಂಬ ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪಿಗೆ ಸುಪ್ರಿಂಕೋರ್ಟ್ ತಡೆಯಾಜ್ಞೆ ನೀಡಿತು.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications