ಸತ್ಯಂ ಹಣ : ಅನಿವಾಸಿಗೆ ಕೇಂದ್ರದ ಅಭಯ

ಶುಕ್ರವಾರ ಇಲ್ಲಿ ಆಯೋಜಿಸಲಾಗಿದ್ದ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಸತ್ಯಂ ಹಗರಣ ಹಾಗೂ ಮೇತಾಸ್ ಪ್ರಕರಣವನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದ್ದು, ಯಾರಿಗೂ ಅನ್ಯಾಯವಾಗದ ಹಾಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು. ಇಂದಿನಿಂದ ಆರಂಭವಾಗಿರುವ ಪ್ರವಾಸಿ ಭಾರತೀಯ ದಿವಸ್ ದ ಇಡೀ ದಿನ ಸತ್ಯಂ ಹಾಗೂ ಮೇತಾಸ್ ಪ್ರಕರಣಗಳ ಬಗ್ಗೆ ಚರ್ಚೆ ನಡೆಯಿತು.
ಅನಿವಾಸಿಗಳಿಗೆ ಮತದಾನ ಹಕ್ಕು, ಪಿಎಂ
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜಗತ್ತಿನ ವಿವಿಧ ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಮತದಾನ ಹಕ್ಕು ನೀಡುವುದಾಗಿ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಭರವಸೆ ನೀಡಿದ್ದಾರೆ. ಈ ಮೂಲಕ ಅನೇಕ ವರ್ಷಗಳಿಂದ ತಾಯಿನಾಡು ಬಿಟ್ಟು ಬಹುದೂರದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಈ ಉಡುಗೊರೆ ನೀಡಲು ನಿರ್ಧರಿಸಿದೆ.
ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಭಾರತೀಯರಿಗೆ ತಮ್ಮ ಹಕ್ಕು ಚಲಾಯಿಸುವ ಎಲ್ಲ ಅರ್ಹತೆಯೂ ಇದೆ. ಭಾರತೀಯರು ಎಲ್ಲೆ ನೆಲೆಸಿದ್ದರೂ ಅವರು ಭಾರತೀಯರೇ, ಸಂವಿಧಾನದಲ್ಲಿ ಕೂಡಾ ಇದನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯನಿರ್ವಹಿಸಲಿದೆ ಎಂದು ಸಿಂಗ್ ವಿವರಿಸಿದರು.
ಕಳೆದ ಅನೇಕ ವರ್ಷಗಳಿಂದ ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಏಕೆ ಸ್ವದೇಶಕ್ಕೆ ಮರಳಬಾರದು? ದೇಶದ ರಾಜಕೀಯಕ್ಕೆ ಪ್ರಜ್ಞಾವಂತರ ಅವಶ್ಯಕತೆ ಇದೆ. ಭಾರತದ ಅಭಿವೃದ್ಧಿಗೆ ತಾವು ಶ್ರಮಿಸುವುದಾದರೆ ಇಲ್ಲಿ ವಿಪುಲ ಅವಕಾಶಗಳಿವೆ. ಬಂಡವಾಳ ಹೂಡುವುದಾಗಲಿ, ಉದ್ಯಮ ಸ್ಥಾಪನೆ ಮಾಡುವುದಾಗಲಿ, ಎಲ್ಲ ಕಾರ್ಯಗಳಿಗೂ ಸರಕಾರ ಅಗತ್ಯ ಸಹಕಾರ ನೀಡಲಿದೆ. ನೀವು ಇಲ್ಲಿಗೆ ಬನ್ನಿ ಎಂದು ಮನಮೋಹನ್ ಸಿಂಗ್ ಆಹ್ವಾನ ನೀಡಿದರು.
ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಸುಮಾರು 40 ದೇಶಗಳ 1,500 ಆಹ್ವಾನಿತರು ಪಾಲ್ಗೊಂಡಿದ್ದರು. ಪ್ರವಾಸಿ ಭಾರತೀಯ ದಿವಸದ ಮೊದಲ ದಿನದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಸತ್ಯಂ ಕರ್ಮಕಾಂಡದ ಬಗ್ಗೆ ಚರ್ಚೆ ನಡೆಯಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications