ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಉಳಿಸಿ ಕಹಳೆ, ವಾಟಾಳ್ ನಾಗರಾಜ್

By Staff
|
Google Oneindia Kannada News

Vatal Nagaraj
ಬೆಂಗಳೂರು, ಜ. 8 : ಬೆಂಗಳೂರು ಕನ್ನಡಿಗರ ಕೈತಪ್ಪಿ ಹೋಗುವ ಲಕ್ಷಣಗಳು ಕಂಡು ಬರುತ್ತಿದ್ದು ಕನ್ನಡ ಪರ ಸಂಘಟನೆಗಳು ಒಗ್ಗಟ್ಟಿನಿಂದ ಬಿಬಿಎಂಪಿ ಚುನಾವಣಾ ಎದುರಿಸದಿದ್ದರೆ ಹೆಚ್ಚಿನ ಸ್ಥಾನಗಳನ್ನು ಕನ್ನಡೇತರರು ಆಕ್ರಮಿಸಲಿದ್ದಾರೆ. ಕನ್ನಡ ಉಳಿಸಿ ರಣ ಕಹಳೆಯೊಂದಿಗೆ ಭಾರಿ ಚಳುವಳಿ ಮತ್ತು ಹೋರಾಟವನ್ನು ಜನವರಿ 16 ರಿಂದ ಆರಂಭಿಸಲಿದ್ದೇವೆ ಎಂದು ಮಾಜಿ ಶಾಸಕ ಮತ್ತು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಜನವರಿ 16ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಳೇಪೇಟೆ ಮೂಲಕ ಪಾದಯಾತ್ರೆ ನಡೆಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಉಳಿವಿಗಾಗಿ ಡಂಗುರ ಹೊರಡಿಸಲಾಗುವುದು ಎಂದು ವಾಟಾಳ್ ಹೇಳಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸದ್ಯದಲ್ಲೇ ನಡೆಯಲಿದ್ದು ಎಲ್ಲಾ ಕನ್ನಡ ಪರ ಸಂಘಟನೆಗಳು ಒಂದಾಗಿ ಕನ್ನಡ ಹಿತಕ್ಕಾಗಿ, ಕಾಳಜಿ ತೋರಿಸದೆ ಇರುವ ರಾಷ್ಟ್ರೀಯ ಪಕ್ಷಗಳ ವಿರುದ್ದ ಸ್ಪರ್ಧಿಸಿ ಕನಿಷ್ಟ 50 ಸ್ಥಾನಗಳನ್ನಾದರೂ ಗೆಲ್ಲಲೇಬೇಕಾಗಿದೆ ಎಂದು ವಾಟಾಳ್ ಹೇಳಿದ್ದಾರೆ. ಇದರ ನಿಮಿತ್ತ ಜಾನಪದ ಕಲಾವಿದರಿಂದ ಕನ್ನಡ ಉಳಿವಿನ ಮೇಳ ನಡೆಯಲಿದೆ ಎಂದು ಮಾಧ್ಯಮಗಳಿಗೆ ವಾಟಾಳ್ ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X