ತಿಮ್ಮಕ್ಕನಿಗೆ ನಾಡೋಜ : ಮಾಗಡಿಯಲ್ಲಿ ಸಂತಸದ ಹೊನಲು

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಗಡಿಗ್ರಾಮ ಹುಲಿಕಲ್ಲು ಕುದೂರು ರಸ್ತೆಯಲ್ಲಿ ಹಾದುಹೋದರೆ ರಸ್ತೆಯ ಎರಡು ಬದಿಗಳಲ್ಲಿರುವ ನೂರಾರು ಮರಗಳ ತಣ್ಣನೆಯ ಗಾಳಿ ನೆರಳು ಸ್ವಾಗತ ನೀಡುತ್ತವೆ. ಇಷ್ಟೆಲ್ಲಾ ಮರಗಳನ್ನ ಸಾಲುಮರದ ತಿಮ್ಮಕ್ಕ ತನ್ನ ಪತಿ ಬಿಕ್ಕಲುತಿಮ್ಮಯ್ಯನೊಂದಿಗೆ ಕೈಜೋಡಿಸಿ ನೀರೆರೆದು ಪೋಷಿಸಿ ಹೆಮ್ಮರವನ್ನಾಗಿಸಿದ್ದಾರೆ. ತಿಮ್ಮಕ್ಕ ದಂಪತಿಗಳಿಗೆ ಮಕ್ಕಳಿಲ್ಲದಿದ್ದರೂ ಗಿಡ ನೆಟ್ಟು ನೀರೆರೆದು ಮರಬೆಳೆಸಿ ಮಕ್ಕಳಿಲ್ಲವೆಂಬ ಕೊರಗನ್ನ ದೂರಮಾಡಿಕೊಂಡು ಸಾರ್ಥಕ ಜೀವನ ನಡೆಸಿದರು.
ಸಾಲುಮರದ ತಿಮ್ಮಕ್ಕನವರ ಮನೆಗೆ ಹಲವಾರು ಸಂಘಸಂಸ್ಥೆಗಳ ಪದಾಧಿಕಾರಿಗಳು ತೆರಳಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಿಮ್ಮಕ್ಕ ಮುಂದಿನ ಜನ್ಮವಂತಿದ್ದರೆ ಮನುಷ್ಯನಾಗಿ ಹುಟ್ಟುವುದಕ್ಕಿಂತ ಫಲಬಿಡುವ ಮರವಾರಿ ಹುಟ್ಟಲು ಇಷ್ಟವೆಂದು ಹೇಳಿದರು. ಎಲ್ಲಾ ಶಾಲೆಗಳ ಪ್ರತಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಂದೊಂದು ಮರವನ್ನ ಬೆಳೆಸಿದರೆ ಸಾರ್ಥಕವಾಗುತ್ತದೆ ಎಂದು ತಿಮ್ಮಕ್ಕ ಹೇಳಿದರು. ತನ್ನ ಸಾಧನೆ ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡಿದವರೆಲ್ಲರು ತಣ್ಣಗಿರಲಿ ಎಂದು ಹಾರೈಸಿದರು. ನನ್ನಂತಹ ಹಲವಾರು ಎಲೆಮರೆಯ ಕಾಯಿಗಳಿಂತಿರುವ ಸಾಧಕರನ್ನ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಿ ಎಂದು ತಿಮ್ಮಕ್ಕ ಆಗ್ರಹಿಸಿದರು.
ಸಾಲುಮರದ ತಿಮ್ಮಕ್ಕನವರ ಸಾಧನೆಯನ್ನ ಗುರುತಿಸಿ ಪ್ರಥಮ ಬಾರಿಗೆ ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ಸಂಧರ್ಭದಲ್ಲಿ 1995ರ ಸಾಲಿನ "ನ್ಯಾಷನಲ್ ಸಿಟಿಜನ್ ಅವಾರ್ಡ್"ನ್ನು 1996ರ ಡಿಸೆಂಬರ್ನಲ್ಲಿ ಪುರಸ್ಕರಿಸಿದರು. ನಂತರ 1997ರಲ್ಲಿ "ಇಂದಿರಾಪ್ರಿಯದರ್ಶಿನಿ ವೃಕ್ಷಮಿತ್ರ ಪುರಸ್ಕಾರ" ದೊರೆಯಿತು. ನಂತರ ರಾಜ್ಯ ಸರ್ಕಾರ 2007-08ರ ಅವಧಿಯ ರಾಜ್ಯ ಪರಿಸರ ಪ್ರಶಸ್ತಿ, ಪಂಪಾಪತಿ ಪ್ರಶಸ್ತಿ ಸೇರಿದಂತೆ ಸಾವಿರಾರು ಪ್ರಶಸ್ತಿ ಪುರಸ್ಕಾರಗಳು ಸಾಲುಮರದ ತಿಮ್ಮಕ್ಕನವರಿಗೆ ಸಂದಿವೆ.
ನಾಡಿನ ಜನತೆಗೆ ಪರಿಸರ ಕಾಳಜಿಯ ಬಗ್ಗೆ ಸ್ಪೂರ್ತಿ ತುಂಬಿ ಮಾದರಿಯಾಗಿರುವ ಸಾಲುಮರದ ತಿಮ್ಮಕ್ಕನಿಗೆ ನಾಡೋಜ ಪ್ರಶಸ್ತಿ ಲಭಿಸಿರುವುದು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ. ಪ್ರತಿಫಲಾಪೇಕ್ಷೆಯನ್ನ ಬಯಸಿ ಕಾರ್ಯನಿರ್ವಹಿಸುವ ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಪತಿಯೊಂದಿಗೆ ಕೈಜೋಡಿಸಿ ಪರಿಸರಕ್ಕೆ ಕೊಡುಗೆಯನ್ನ ನೀಡಿರುವ ಸಾಲುಮರದ ತಿಮ್ಮಕ್ಕನವರ ಸಾಧನೆ ಅನನ್ಯವಾದುದು.
ನಾಡಪ್ರಭು ಕೆಂಪೇಗೌಡರ ನಾಡು ಮಾಗಡಿಯ ಪುಣ್ಯಭೂಮಿಯಲ್ಲಿ ಅನೇಕ ಸಾಧ್ವಿ ಶಿರೋಮಣಿಗಳಿದ್ದು ಇತಿಹಾಸದ ಪುಟಸೇರಿದ್ದಾರೆ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿ ಅಕ್ಷರದ ಅರಿವಿಲ್ಲದ ಸಾಲುಮರದ ತಿಮ್ಮಕ್ಕ ಬೆಳೆಸಿ ಪರಿಸರ ಕಾಳಜಿ ಬಗ್ಗೆ ಜನತೆಗೆ ಪಾಠ ಕಲಿಸಿದ್ದಾರೆ. ಬದುಕಿನ ಮುಸ್ಸಂಜೆಯಲ್ಲಿರುವ ಸಾಲುಮರದ ತಿಮ್ಮಕ್ಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿಕೊಳ್ಳುವುದರ ಮೂಲಕ ಮನುಕುಲಕ್ಕೆ ಮಾದರಿಯೆನಿಸಿದ್ದಾರೆ.
ತಿಮ್ಮಕ್ಕ ತಮ್ಮ ಹುಟ್ಟೂರು ಹುಲಿಕಲ್ನಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತಹ ಕೆಲಸವನ್ನ ಮಾಡುವ ಅದಮ್ಯ ಆಸೆಯನ್ನಿಟ್ಟುಕೊಂಡಿದ್ದಾರೆ. ಇಷ್ಟೆಲ್ಲಾ ಪ್ರಖ್ಯಾತಿ ಹೊಂದಿರುವ ಸಾಲುಮರದ ತಿಮ್ಮಕ್ಕ ಹುಲಿಕಲ್ನ ತನ್ನ ಪುಟ್ಟ ಮನೆಯಲ್ಲಿ ಇಂದಿಗೂ ಏಕಾಂಗಿಯಾಗಿಯೇ ಬದುಕು ನಡೆಸುತ್ತಿದ್ದಾರೆ. ಮಧುಮೇಹವಿದ್ದರು ಮಿತಆಹಾರದೊಂದಿಗೆ ಉತ್ತಮ ಆರೋಗ್ಯ ಕಾಪಾಡಿಕೊಂಡಿರುವ ಸಾಲುಮರದ ತಿಮ್ಮಕ್ಕ ಯಾರನ್ನ ಅವಲಂಬಿಸದೇ ಸ್ವಾವಲಂಬಿಯಾಗಿಯೇ ಇಳಿವಯಸ್ಸಿನಲ್ಲೇ ದಿನದೂಡುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications