ಭಾರತ, ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ

ಶನಿವಾರ ಮುಂಜಾನೆ 4 ಗಂಟೆಯ ಸಮಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ತತ್ ಕ್ಷಣವೆ ಗಡಿ ಭದ್ರತಾ ಪಡೆ (ಬಿಎಸ್ ಎಫ್) ಹಾಗೂ ಸೈನ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದರು ಎಂದು ಭಾರತೀಯ ಸೈನಿಕಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿಯ ನೀಡಿದ್ದಾರೆ.
ಭಾರತದ ಗಡಿಯೊಳಗೆ ನುಸುಳುವ ಪಾಕಿಸ್ತಾನದ ಪ್ರಯತ್ನಕ್ಕೆ ತಕ್ಕ ಉತ್ತರ ನೀಡಿದ್ದೇವೆ ಎಂದು ಬಿಎಸ್ ಎಫ್ ನ ಡಿಐಜಿ ತಿಳಿಸಿದ್ದಾರೆ. ಜಮ್ಮು ಅಂಕ್ನೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ. ಏತನ್ಮಧ್ಯೆ ಪಂಜಾಬ್ ನ ಅಮೃತಸರ್ ಜಿಲ್ಲೆಯ ಮೇಲೆ ಉಗ್ರರು ರಾಕೆಟ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.












Click it and Unblock the Notifications