ಗ್ರಹಣ ನೋಡುವವರಿಗೆ ಕಾಫಿ ಟೀ ಬಿಸ್ಕತ್

ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗುವ ಕಂಕಣ ಗ್ರಹಣವು ಮಧ್ಯಾಹ್ನ 3 ಕ್ಕೆ ಕೊನೆಗೊಳ್ಳಲಿದೆ. ಶತಮಾನದ ಅಪರೂಪದ ವ್ಶೆಜ್ಞಾನಿಕ ಘಟನೆಯಾದ ಗ್ರಹಣವನ್ನು ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಖಗೋಳ ಆಸಕ್ತರು ವೀಕ್ಷಿಸಲು ಜಿಲ್ಲೆಯಲ್ಲಿ ಆಯ್ದ ಶಾಲಾ ಕಾಲೇಜುಗಳಲ್ಲಿ ಗ್ರಹಣ ವೀಕ್ಷಣಾ ಕೇಂದ್ರಗಳನ್ನು ವಿಜ್ಞಾನ ಪರಿಷತ್ ವತಿಯಿಂದ ತೆರೆಯಲಾಗುತ್ತದೆ.
ವಿಜ್ಞಾನ ಪರಿಷತ್ ವತಿಯಿಂದ ಗ್ರಹಣ ವೀಕ್ಷಿಸಲು ಸೌರ ಕನ್ನಡಕಗಳನ್ನು ಈಗಾಗಲೇ ವೀಕ್ಷಣಾ ಕೇಂದ್ರಗಳಿಗೆ ಒದಗಿಸಲಾಗಿದೆ. ಈ ಸಂದರ್ಭ ಗ್ರಹಣ ಕುರಿತಂತೆ ಉಪನ್ಯಾಸ, ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಖಗೋಳ ಆಸಕ್ತರಿಗೆ ಗ್ರಹಣದ ಕುರಿತು ವೈಜ್ಞಾನಿಕ ಮಾಹಿತಿ ನೀಡಲಾಗುವುದು.
ಗ್ರಹಣವನ್ನು ಬರೀಗಣ್ಣಿನಿಂದ ನೋಡದೆ ಸೌರ ಕನ್ನಡಕ ಇಲ್ಲವೇ ಸುರಕ್ಷತಾ ಸಾಧನಗಳ ಮೂಲಕ ವೀಕ್ಷಿಸಬಹುದು. ಈ ಸಂದರ್ಭದಲ್ಲಿ ಕಾಫಿ, ಟೀ, ಬಿಸ್ಕತ್ , ಬಾಳೆಹಣ್ಣು ಮತ್ತಿತರ ಆಹಾರ ಸೇವಿಸುವ ಮೂಲಕ ಗ್ರಹಣ ಬಗ್ಗೆ ಇರುವ ಮೌಢ್ಯತೆ ತೊಡೆದು ಹಾಕಲು ಶಿಕ್ಷಕ ಸಮುದಾಯ ಹಾಗೂ ಖಗೋಳ ಆಸಕ್ತರಲ್ಲಿ ಮನವಿ ಮಾಡಲಾಗಿದೆ.
ಜಿಲ್ಲೆಯಲ್ಲಿ ವಿಜ್ಞಾನ ಪರಿಷತ್ ವತಿಯಿಂದ ಮಡಿಕೇರಿ ಸಂತ ಮೈಕಲ್ ರ ಪ್ರೌಢಶಾಲೆ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆ, ಗೋಣಿಕೊಪ್ಪ ಪ್ರೌಢಶಾಲೆ, ಸೋಮವಾರಪೇಟೆ, ಸುಂಟಿಕೊಪ್ಪ, ಕುಶಾಲನಗರ, ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೂಡಿಗೆ ಡಯಟ್, ಕುಶಾಲನಗರ ವಿವೇಕಾನಂದ ಪಿ.ಯೂ.ಕಾಲೇಜು, ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಮಾದಾಪುರ ಡಿ.ಚೆನ್ನಮ್ಮ ಕಾಲೇಜು, ಕೊಡಗನಹಳ್ಳಿ ಸುಂಡಿಕೊಪ್ಪ ನಾಡು ಪ್ರೌಢಶಾಲೆ ಹಾಗೂ ಶಾಂತಿನೀಕೇತನ ಪ್ರೌಢಶಾಲೆಗಳ ಕೇಂದ್ರಗಳಲ್ಲಿ ಗ್ರಹಣ ವೀಕ್ಷಿಸಲು ಈಗಾಗಲೇ ಸೌರ ಕನ್ನಡಕಗಳನ್ನು ವಿತರಿಸಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications