ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪಲೋಕಾಯುಕ್ತರಾಗಿ ಬನ್ನೂರಮಠ?

|
Google Oneindia Kannada News

SR Bannurmath
ಬೆಂಗಳೂರು, ಜ. 12 : ರಾಜ್ಯದಲ್ಲಿ ಕಳೆದ 20 ದಿನಗಳಿಂದ ಖಾಲಿ ಉಳಿದಿರುವ ಕರ್ನಾಟಕ ಉಪಲೋಕಾಯುಕ್ತ ಹುದ್ದೆಗೆ ನೇಮಕಗೊಳ್ಳಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಲ್ಲಿ ಪೈಪೋಟಿ ಆರಂಭವಾಗಿದೆ. ಕೇರಳ ಹೈಕೋರ್ಟ್ ನ ಎಸ್ ಆರ್ ಬನ್ನೂರಮಠ ಅವರನ್ನು ನೇಮಿಸಲು ಸರಕಾರ ಆಸಕ್ತಿ ತೋರಿದ್ದು, ಇನ್ನೂ ಅಂತಿಮ ತಿರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ನ್ಯಾಯಮೂರ್ತಿ ಪತ್ರಿ ಬಸವನಗೌಡ ಅವರ ನಿವೃತ್ತಿಯಿಂದ ತೆರವಾಗಿರುವ ಸ್ಥಾನ ಭರ್ತಿಗೆ ಅರ್ಹ ನ್ಯಾಯಮೂರ್ತಿಗಳ ಶೋಧ ನಡೆದಿದೆ. ಈ ತಿಂಗಳ 20 ರಂದು ಕೇರಳ ಹೈಕೋರ್ಟ್ ನಿಂದ ನಿವೃತ್ತಿಯಾಗಲಿರುವ ಎಸ್ ಆರ್ ಬನ್ನೂರಮಠ ಅವರ ಹೆಸರು ಮುಂಚೂಣಿಯಲ್ಲಿದೆ. ಲಭ್ಯ ಮಾಹಿತಿಗಳ ಪ್ರಕಾರ ಉಪಲೋಕಾಯುಕ್ತರಾಗಿ ಬನ್ನೂರಮಠ ನೇಮಕವಾಗುವುದು ಬಹುತೇಕ ಖಚಿತ ಎಂದು ಕಾನೂನು ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ. ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಬನ್ನೂರಮಠ ಅವರ ಕಳೆದ ಏಳು ತಿಂಗಳ ಹಿಂದೆ ಕೇರಳ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X