ಮಹಾಕುಂಭಮೇಳಕ್ಕೆ ಹರಿದ್ವಾರ ಸಂಪೂರ್ಣ ಸಜ್ಜು

ದೇಶದ ಮೂಲೆಮೂಲೆಗಳಿಂದ ಸಾಧು ಸಂತರು ಮುಖ್ಯವಾಗಿ ನಾಗಾ ಸಾಧುಗಳು ಹರಿದ್ವಾರ ತಲುಪಿದ್ದು, ಮಕರ ಸಂಕ್ರಾಂತಿ ದಿನದಂದು ಸೂರ್ಯ ತನ್ನ ನಡೆಯನ್ನು ಉತ್ತರಾಯಣದಿಂದ ದಕ್ಷಿಣಾಯಣಕ್ಕೆ ಕಡೆಗೆ ದಿಕ್ಕು ಬದಲಿಸುತ್ತಾನೆ. ಈ ಪವಿತ್ರ ಗಳಿಗೆಯಲ್ಲಿ ಕೋಟ್ಯಂತರ ಹಿಂದೂಗಳು ಪವಿತ್ರ ಗಂಗಾ ನದಿಯಲ್ಲಿ ಮಿಂದೇಳುತ್ತಾರೆ. ಎಂಟು ಲಕ್ಷ ಭಕ್ತರು ಹರಿದ್ವಾರ ತಲುಪಿದ್ದಾರೆ ಎಂದು ಅಂದಾಜಿಸಲಾಗಿದೆ.
ಮಹಾಕುಂಭಮೇಳಕ್ಕೆ ಸಂಬಂಧಿಸಿದಂತೆ ವ್ಯಾಪಕ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. 10 ಸಾವಿರಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ಕೇಂದ್ರ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಮೇಳದ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲು ನಿರ್ಧರಿಸಿದೆ.
ವಿಡಿಯೋ: ಮಹಾಕುಂಭಮೇಳಕ್ಕೆ ಹರಿದು ಬಂದ ಜನಸಾಗರ
ಪ್ರತಿ ಮೂರು ವರ್ಷಕ್ಕೊಮ್ಮೆ ಅರ್ಧ ಕುಂಭಮೇಳವನ್ನು ಆಚರಿಸಲಾಗುತ್ತಿದೆ. ಪೂರ್ಣ ಕುಂಭಮೇಳವನ್ನು ಜಗತ್ತಿನಲ್ಲಿ ನಡೆಯುವ ಅತ್ಯಂತ ದೊಡ್ಡ ಭಕ್ತರ ಮೇಳ ಎಂಬ ಹೆಗ್ಗಳಿಕೆ ಹೊಂದಿದೆ. ಈ ಮೇಳವನ್ನು ಭಾರತದ ನಾಲ್ಕು ಪ್ರಮುಖ ನಗರಗಳಲ್ಲಿ ಆಚರಿಸಲಾಗುತ್ತಿದ್ದು, ಅರ್ಧ ಕುಂಭಮೇಳಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ಆಚರಿಸಲಾಗುವುದು. ಈ ಸಾರಿ ಹರಿದ್ವಾರದಲ್ಲಿ ನಡೆಯಲಿರುವ ಮೇಳ ಪೂರ್ಣ ಕುಂಭಮೇಳವಾಗಿದ್ದು, ಭಾರಿ ಪ್ರಮಾಣದ ಭಕ್ತರು ಸೇರುವ ನಿರೀಕ್ಷೆಯಿದೆ.
ಭಾರತದ ನಾಲ್ಕು ನಗರಗಳಲ್ಲಿ ಮಹಾಕುಂಭಮೇಳವನ್ನು ಆಚರಿಸಲಾಗುತ್ತಿದ್ದು, 2010ರ ಪೂರ್ಣ ಕುಂಭಮೇಳವನ್ನು ಗಂಗಾ ನದಿ ದಂಡೆಯಲ್ಲಿರುವ ಹಿಮಾಲಯ ಶಿಖರಗಳ ಕೆಳಗಿರುವ ಹರಿದ್ವಾರದಲ್ಲಿ ಆಚರಿಸಲಾಗುತ್ತಿದೆ. ಅಲಹಾಬಾದ್ ನ ಪ್ರಯಾಗ್, ಉಜ್ಜೈನಿ ಮತ್ತು ನಾಸಿಕ್ ನಲ್ಲಿಯೂ ಸಹ ಮಹಾಮೇಳವನ್ನು ಆಚರಿಸಲಾಗುತ್ತದೆ. 12 ವರ್ಷಕ್ಕೊಮ್ಮೆ ಪೂರ್ಣಕುಂಭಮೇಳವನ್ನು ಆಚರಿಸಲಾಗುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications