ದೇಜಗೌ, ಹೆಗ್ಗಡೆಗೆ ಕರ್ನಾಟಕ ರತ್ನ

ನಾಡು, ನುಡಿ, ಜಾನಪದ, ಅನುವಾದ ಸಾಹಿತ್ಯ ಸೇರಿದಂತೆ ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ವಿಶಿಷ್ಟ ಕೊಡುಗೆ ಪರಿಗಣಿಸಿ, 2008ನೇ ಸಾಲಿನ ಪ್ರಶಸ್ತಿಗೆ ದೇಜಗೌ ಅವರನ್ನು ಆಯ್ಕೆ ಮಾಡಲಾಗಿದೆ. ಸಮಾಜ ಸೇವೆ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆ ಪರಿಗಣಿಸಿ, 2009ನೇ ಸಾಲಿನ ಪ್ರಶಸ್ತಿಗೆ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಸರಕಾರ 1992ರಿಂದ ಈ ಪ್ರಶಸ್ತಿ ನೀಡುತ್ತಿದೆ. ನ್ಯಾ.ಡಾ. ವಿ.ಎಸ್. ಮಳೀಮಠ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ವೀರೇಂದ್ರ ಹೆಗ್ಗಡೆ ಹಾಗೂ ದೇಜಗೌಗೆ ಸರಕಾರ ಪ್ರಶಸ್ತಿ ಘೋಷಿಸಿದೆ. ದೇ.ಜವರೇಗೌಡ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ದೇ. ಜವರೇಗೌಡ, ಸಾಹಿತಿ, ಶಿಕ್ಷಣ ತಜ್ಞ ಹಾಗೂ ಕನ್ನಡ ಪರ ಹೋರಾಟಗಾರ. ಟಾಲ್ಸ್ಟಾಯ್ ಸೇರಿದಂತೆ ಹಲವು ಜಗದ್ವಿಖ್ಯಾತ ಸಾಹಿತಿಗಳ ಕೃತಿಗಳನ್ನು ಅನುವಾದದ ಮೂಲಕ ಕನ್ನಡಿಗರಿಗೆ ಪರಿಚಯಿಸಿದರು. ಮೈಸೂರು ವಿವಿ ಕನ್ನಡ ವಿಶ್ವಕೋಶಕ್ಕೆ ಇವರ ಕೊಡುಗೆ ಗಮನಾರ್ಹ.
ವಿವಿಯ ಜಾನಪದ ವಿಭಾಗಕ್ಕೆ ರೂಪುರೇಷೆ ನೀಡಿದ ದೇಜಗೌ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಕನ್ನಡ ವಿವಿಯ ನಾಡೋಜ ಮತ್ತಿತರ ಗೌರವ ಸಂದಿದೆ. ಗ್ರಾಮೀಣ ಹಿನ್ನೆಲೆಯಿಂದ ಬಂದು ವಿವಿಯ ಅತ್ಯುನ್ನತ ಸ್ಥಾನ ಅಲಂಕರಿಸಿದ ಅಪರೂಪದ ವ್ಯಕ್ತಿ.
ವೀರೇಂದ್ರ ಹೆಗ್ಗಡೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮೀಣಾಭಿವೃದ್ಧಿ ಯೋಜನೆ, ಸ್ವಉದ್ಯೋಗ ತರಬೇತಿ ನೀಡುವ ರುಡ್ಸೆಟ್ನ ರೂವಾರಿ ಮತ್ತು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಿ ಡಾ.ವೀರೇಂದ್ರ ಹೆಗ್ಗಡೆ ಮನೆಮಾತಾಗಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಅವರು, ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಯ ಮರುವಸತಿಗೂ ನೆರವಾಗಿದ್ದಾರೆ. ಪದ್ಮಭೂಷಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications