ದೇಜಗೌ, ಹೆಗ್ಗಡೆಗೆ ಕರ್ನಾಟಕ ರತ್ನ

ನಾಡು, ನುಡಿ, ಜಾನಪದ, ಅನುವಾದ ಸಾಹಿತ್ಯ ಸೇರಿದಂತೆ ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ವಿಶಿಷ್ಟ ಕೊಡುಗೆ ಪರಿಗಣಿಸಿ, 2008ನೇ ಸಾಲಿನ ಪ್ರಶಸ್ತಿಗೆ ದೇಜಗೌ ಅವರನ್ನು ಆಯ್ಕೆ ಮಾಡಲಾಗಿದೆ. ಸಮಾಜ ಸೇವೆ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆ ಪರಿಗಣಿಸಿ, 2009ನೇ ಸಾಲಿನ ಪ್ರಶಸ್ತಿಗೆ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಸರಕಾರ 1992ರಿಂದ ಈ ಪ್ರಶಸ್ತಿ ನೀಡುತ್ತಿದೆ. ನ್ಯಾ.ಡಾ. ವಿ.ಎಸ್. ಮಳೀಮಠ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ವೀರೇಂದ್ರ ಹೆಗ್ಗಡೆ ಹಾಗೂ ದೇಜಗೌಗೆ ಸರಕಾರ ಪ್ರಶಸ್ತಿ ಘೋಷಿಸಿದೆ. ದೇ.ಜವರೇಗೌಡ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ದೇ. ಜವರೇಗೌಡ, ಸಾಹಿತಿ, ಶಿಕ್ಷಣ ತಜ್ಞ ಹಾಗೂ ಕನ್ನಡ ಪರ ಹೋರಾಟಗಾರ. ಟಾಲ್ಸ್ಟಾಯ್ ಸೇರಿದಂತೆ ಹಲವು ಜಗದ್ವಿಖ್ಯಾತ ಸಾಹಿತಿಗಳ ಕೃತಿಗಳನ್ನು ಅನುವಾದದ ಮೂಲಕ ಕನ್ನಡಿಗರಿಗೆ ಪರಿಚಯಿಸಿದರು. ಮೈಸೂರು ವಿವಿ ಕನ್ನಡ ವಿಶ್ವಕೋಶಕ್ಕೆ ಇವರ ಕೊಡುಗೆ ಗಮನಾರ್ಹ.
ವಿವಿಯ ಜಾನಪದ ವಿಭಾಗಕ್ಕೆ ರೂಪುರೇಷೆ ನೀಡಿದ ದೇಜಗೌ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಕನ್ನಡ ವಿವಿಯ ನಾಡೋಜ ಮತ್ತಿತರ ಗೌರವ ಸಂದಿದೆ. ಗ್ರಾಮೀಣ ಹಿನ್ನೆಲೆಯಿಂದ ಬಂದು ವಿವಿಯ ಅತ್ಯುನ್ನತ ಸ್ಥಾನ ಅಲಂಕರಿಸಿದ ಅಪರೂಪದ ವ್ಯಕ್ತಿ.
ವೀರೇಂದ್ರ ಹೆಗ್ಗಡೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮೀಣಾಭಿವೃದ್ಧಿ ಯೋಜನೆ, ಸ್ವಉದ್ಯೋಗ ತರಬೇತಿ ನೀಡುವ ರುಡ್ಸೆಟ್ನ ರೂವಾರಿ ಮತ್ತು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಿ ಡಾ.ವೀರೇಂದ್ರ ಹೆಗ್ಗಡೆ ಮನೆಮಾತಾಗಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಅವರು, ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಯ ಮರುವಸತಿಗೂ ನೆರವಾಗಿದ್ದಾರೆ. ಪದ್ಮಭೂಷಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications