ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಕ್ರಮ ಸಕ್ರಮ : ಸುಗ್ರಿವಾಜ್ಞೆಗೆ ರಾಜ್ಯಪಾಲರ ನಕಾರ
ಅಕ್ರಮ ಸಕ್ರಮ ಯೋಜನೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲು ಇದೇ 12 ರಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು. ಇದರ ಅನ್ವಯ ಸಾರಿಗೆ ಸಚಿವ ಆರ್ ಅಶೋಕ್ ನೇತೃತ್ವದ ತಂಡ ಬುಧವಾರ ರಾಜ್ಯಪಾಲರನ್ನು ಬೇಟಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡುವಂತೆ ಕೋರಿತ್ತು.
ಸರಕಾರದ ಪ್ರಸ್ತಾವವನ್ನು ಪರಿಶೀಲಿಸಿದ ರಾಜ್ಯಪಾಲರು, ಅಕ್ರಮ ಸಕ್ರಮ ಯೋಜನೆ ವಿವಾದಗಳಿಂದ ಮುಕ್ತವಾಗಿಲ್ಲ. ಹೀಗಾಗಿ ವಿಧಾನಮಂಡಲದ ಉಭಯ ಸದನಗಳಲ್ಲಿ ಸಮಗ್ರವಾಗಿ ಚರ್ಚೆಯಾದ ನಂತರವೇ ಜಾರಿಯಾಗುವುದು ಸೂಕ್ತ ಎಂದು ಹೇಳುವ ಮೂಲಗ ಗುರುವಾರ ಹಿಂದಕ್ಕೆ ಕಳುಹಿಸಿದ್ದಾರೆ.
Comments
Story first published: Friday, January 15, 2010, 11:00 [IST]