Get Updates
Get notified of breaking news, exclusive insights, and must-see stories!

ಪಿಡಿ ದಿನಕರನ್ ಬೆಂಬಲಿಸಿದ ಕೆಜಿ ಬಾಲಕೃಷ್ಣನ್

KG Balakrishnan, Chief Justice of India
ನವದೆಹಲಿ, ಜ. 16 : ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಅವರನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕೆಜಿ ಬಾಲಕೃಷ್ಣನ್ ಅವರು ಸಮರ್ಥಿಸಿಕೊಂಡಿದ್ದಾರೆ.

ಅಕ್ರಮ ಆಸ್ತಿ ಹೊಂದಿದ್ದಕ್ಕಾಗಿ ಅವರ ವಿರುದ್ಧ ಜರುಗಿಸುತ್ತಿರುವ ದೋಷಾರೋಪ ಪ್ರಕ್ರಿಯೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಅವರು, ದಿನಕರನ್ ಅವರನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಭಡ್ತಿ ನೀಡಲು ಶಿಫಾರಸು ನೀಡಿದ ಮೇಲೆ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು ಹೇಳಿ ದಿನಕರನ್ ಅವರನ್ನು ಬೆಂಬಲಿಸಿದ್ದಾರೆ.

ಮದ್ರಾಸ್ ಹೈಕೋರ್ಟಿನಲ್ಲಿ ನ್ಯಾಯಮೂರ್ತಿಯಾಗಿದ್ದಾಗ ಮತ್ತು ನಂತರ 2008ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದಾಗ ಅವರ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪವೂ ಇರಲಿಲ್ಲ. ಆದರೆ, ಸರ್ವೋಚ್ಚ ನ್ಯಾಯಾಲಯಕ್ಕೆ ಭಡ್ತಿ ನೀಡಲು ಅವರು ಹೆಸರು ಪ್ರಸ್ತಾಪವಾದಾಗ ಈ ಆರೋಪಗಳೆಲ್ಲ ಹೊರಬಂದವು ಎಂದು ಬಾಲಕೃಷ್ಣನ್ ಅಭಿಪ್ರಾಯಪಟ್ಟರು.

ಮುಖ್ಯ ನ್ಯಾಯಮೂರ್ತಿಯ ಕಚೇರಿಯನ್ನು ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ತರಬೇಕೆಂಬ ಪ್ರಸ್ತಾವನೆಯನ್ನು ತಾವು ವಿರೋಧಿಸಿದ್ದಾಗಿ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಅವರು ಸಾರಾಸಗಟಾಗಿ ತಳ್ಳಿಹಾಕಿದರು.

ಸರ್ವೋಚ್ಚ ನ್ಯಾಯಾಲಯದ ಭಡ್ತಿಯನ್ನು ತಡೆಹಿಡಿದಿರುವುದರಿಂದ ದಿನಕರನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣಗಳನ್ನು ಆಲಿಸುತ್ತಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+