ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿ ಎಸ್ ಯಡಿಯೂರಪ್ಪ ಅವರಿಗೆ ಹೊಟ್ಟೆ ನೋವು

By Rajendra
|
Google Oneindia Kannada News

BS Yeddyurappa
ಬೆಂಗಳೂರು, ಜ.16: ಹೊಟ್ಟೆನೋವಿನ ಕಾರಣ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಆಹಾರದಲ್ಲಿ ಉಂಟಾದ ವ್ಯತ್ಯಾಸದ ಕಾರಣ ಕೇರಳ ಪ್ರವಾಸವನ್ನು ಮೊಟಕುಗೊಳಿಸಿ ಅವರು ನಗರಕ್ಕೆ ಹಿಂತಿರುಗಿದ್ದರು.

ಬುಧವಾರ ಚಿಕಿತ್ಸೆ ಪಡೆದ ಅವರು ಗುರುವಾರ ದಿನವಿಡೀ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಶುಕ್ರವಾರ ಮತ್ತೆ ಹೊಟ್ಟೆ ನೋವು ಕಾಣಿಸಿದ ಕಾರಣ ಚಿಕಿತ್ಸೆಗಾಗೊ ಆಸ್ಪತ್ರೆಗೆ ದಾಖಲಾದರು. ವೈದ್ಯರ ಸಲಹೆ ಮೇರೆಗೆ ಕೆಲಕಾಲ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದರು.

ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಅವರು ಮನೆಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ. ಶನಿವಾರ ಅವರು ಹೊಸಕೋಟೆ ತಾಲೂಕಿನ ಏಕರಾಜಪುರದಲ್ಲಿ ನಡೆಯುವ ನಿರಂತರ ಜ್ಯೋತಿ ಯೋಜನೆ ಮೊದಲ ಹಂತದ ಕಾಮಗಾರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X