ಬಿ ಎಸ್ ಯಡಿಯೂರಪ್ಪ ಅವರಿಗೆ ಹೊಟ್ಟೆ ನೋವು

ಬುಧವಾರ ಚಿಕಿತ್ಸೆ ಪಡೆದ ಅವರು ಗುರುವಾರ ದಿನವಿಡೀ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಶುಕ್ರವಾರ ಮತ್ತೆ ಹೊಟ್ಟೆ ನೋವು ಕಾಣಿಸಿದ ಕಾರಣ ಚಿಕಿತ್ಸೆಗಾಗೊ ಆಸ್ಪತ್ರೆಗೆ ದಾಖಲಾದರು. ವೈದ್ಯರ ಸಲಹೆ ಮೇರೆಗೆ ಕೆಲಕಾಲ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದರು.
ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಅವರು ಮನೆಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ. ಶನಿವಾರ ಅವರು ಹೊಸಕೋಟೆ ತಾಲೂಕಿನ ಏಕರಾಜಪುರದಲ್ಲಿ ನಡೆಯುವ ನಿರಂತರ ಜ್ಯೋತಿ ಯೋಜನೆ ಮೊದಲ ಹಂತದ ಕಾಮಗಾರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.











Click it and Unblock the Notifications