ಶಿರೂರು ಶ್ರೀಗಳ ತೆಕ್ಕೆಗೆ ಅಕ್ಷಯ ಸಟ್ಟುಗ

ಇಂದು ಬೆಳಗ್ಗೆ ನಸುಕಿನಲ್ಲಿ ಉಡುಪಿ ಸಮೀತ ಕಾಪು ಬಳಿಯ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಜೋಡುಕಟ್ಟೆ ಪ್ರವೇಶಿಸಿದ ಶಿರೂರು ಯತಿಗಳನ್ನು ಸಾರ್ವಜನಿಕರು ಮತ್ತು ಭಕ್ತಾದಿಗಳು ಅದ್ಧೂರಿಯಿಂದ ಬರಮಾಡಿಕೊಂಡರು. ಜೋಡುಕಟ್ಟೆ ವೃತ್ತದಿಂದ ರಥಬೀದಿಯವರೆಗೆ ನಡೆದ ಭವ್ಯ ಮೆರವಣಿಗೆಯಲ್ಲಿ ಉಡುಪಿಯ ವಿವಿಧ ಮಠಾಧೀಶರು ಭಾಗಹಿಸಿದ್ದರು. ಕೋಲ, ಹುಲಿವೇಷ, ನಾಗಬ್ರಹ್ಮ, ಯಕ್ಷಗಾನ ಮುಂತಾದ ಪರಶುರಾಮ ಸೃಷ್ಟಿಯ ವಿವಿಧ ಜಾನಪದ ಕಲೆಗಳನ್ನು ಬಿಂಬಿಸುವ ಸುಮಾರು 25 ಟ್ಯಾಬ್ಲೋಗಳು ಕಲಾಪ್ರದರ್ಶನ ಮಾಡಿದವು.
ರಥಬೀದಿ ಪ್ರವೇಶಿಸಿದ ಶಿರೂರು ಶ್ರೀಗಳು ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವರ ದರ್ಶನ ಪಡೆದು, ಸಾಂಪ್ರದಾಯಿಕವಾಗಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಶ್ರೀಕೃಷ್ಣ ಮಠ ಪ್ರವೇಶಿಸಿದ ಶ್ರೀಗಳು ಮುಖ್ಯಪ್ರಾಣ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪುತ್ತಿಗೆ ಮಠದ ಶ್ರೀಗಳಾದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಂದ ಪರ್ಯಾಯ ಪೂಜಾ ಹಸ್ತಾಂತರದ ಪ್ರಮುಖ ಘಟ್ಟವಾದ ಅಕ್ಷಯ ಸಟ್ಟುಗ ಮತ್ತು ಮಠದ ಕೀಲಿ ಕೈಯನ್ನು ಸ್ವೀಕರಿಸಿದರು.
ದೇವಾಲಯ ಆವರಣದ ರಾಜಾಂಗಣದಲ್ಲಿ ನಡೆದ ಪರ್ಯಾಯ ದರ್ಬಾರ್ ನಲ್ಲಿ ಉಡುಪಿಯ ಎಲ್ಲಾ ಮಠಾಧೀಶರು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ವಿಎಸ್ ಆಚಾರ್ಯ, ಕೇಂದ್ರ ಸಚಿವ ಜಿತಿನ್ ಪ್ರಸಾದ್, ಉಡುಪಿ ಸಂಸದ ಸದಾನಂದ ಗೌಡ, ಶಾಸಕ ರಘುಪತಿ ಭಟ್, ಆಸ್ಕರ್ ಫರ್ನಾಂಡಿಸ್ ಮುಂತಾದ ಗಣ್ಯರು ಭಾಗವಹಿಸಿದ್ದರು. ಟಿಟಿಡಿ ಮಂಡಳಿಯ ವತಿಯಿಂದ ತಿರುಪತಿ ವೆಂಕಟೇಶ್ವರ ದೇವಾಲಯದ ಪ್ರಸಾದವನ್ನು ಶಿರೂರು ಶ್ರೀಗಳಿಗೆ ನೀಡಲಾಯಿತು. ಪರ್ಯಾಯ ದರ್ಬಾರ್ ಮುಗಿದ ನಂತರ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಿತು. ಸುಮಾರ್ ಐದು ಲಕ್ಷ ಜನ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications