ಜಿಗಿ ಜಿಗಿಯುತ ನಲಿ ಗಗನದ ಬಯಲಲಿ

ತುಳು ನಾಡಿನ ಭೂತಾರಾಧನೆಯನ್ನು ಹೋಲುವ ಬೃಹತ್ ಗಾಳಿಪಟ ಬಾನಂಗಳದಲ್ಲಿ ಮೋಡಿಮಾಡಿದ್ದಂತು ನಿಜ. ಪಣಂಬೂರು ಬೀಚ್ ಪ್ರವಾಸೊದ್ಯಮ ಅಭಿವೃದ್ದಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಆಹಾರೋತ್ಸವ ಕೂಡಾ ಗಾಳಿಪಟ ಉತ್ಸವಕ್ಕೆ ಪೂರಕವಾಗಿತ್ತು. ಮೀನಿನ ಸುಮಾರು ಐವತ್ತಕ್ಕೂ ಹೆಚ್ಚು ವಿವಿಧ ಖಾದ್ಯಗಳನ್ನು ಸವಿಯುವ ಅವಕಾಶವಿತ್ತು. ಸಿಗಡಿ, ಬೊಂಡಾಸ್, ಮಾಂಜಿ ಮುಂತಾದ ಮೀನುಗಳಲ್ಲದೆ ಕರಾವಳಿಯ ತಿನಿಸುಗಳಾದ ಮೂಡೆ, ಪತ್ರೊಡೆ ಕೂಡಾ ಲಭ್ಯವಿತ್ತು.
ಸಾಮಾನ್ಯವಾಗಿ ಪಣಂಬೂರು ಸಮುದ್ರಕಿನಾರೆ ಶನಿವಾರ ಮತ್ತು ಭಾನುವಾರ ಜನಜಾತ್ರೆಯಿಂದ ತುಂಬಿ ತುಳುಕುತ್ತಿರುತ್ತದೆ. ಗಾಳಿಪಟ ಉತ್ಸವದ ಪ್ರಯುಕ್ತ ಸಮುದ್ರಕಿನಾರೆಯಲ್ಲಿ ಸೇರಿದ್ದ ಜನಸಂಖ್ಯೆ ಸುಮಾರು ಒಂದು ಲಕ್ಷಕ್ಕೂ ಅಧಿಕವಾಗಿತ್ತು. ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗುವ ಬೀಚ್ ಉತ್ಸಕ್ಕೆ ಇಷ್ಟು ಪ್ರಮಾಣದಲ್ಲಿ ಬೀಚ್ನಲ್ಲಿ ಜನ ಸೇರುತ್ತಿದ್ದರು. ಆದರೆ ಈಬಾರಿ ಹಿಂದಿನ ಎಲ್ಲ ದಾಖಲೆಗಳನ್ನೂ ಮುರಿದು ಜಮಾಯಿಸಿತ್ತು ಜನಜಂಗುಳಿ. ಎರಡು ಕಿ.ಮೀ ಉದ್ದಕ್ಕೂ ವಾಹನಗಳ ಸಾಲು.
ನಿಜಕ್ಕೂ ಗಾಳಿಪಟಗಳನ್ನು ಹಾರಿಸುವ ಪರಿಪಾಟ ಹಳ್ಳಿಗಳಿಂದಲೂ ಮಾಯವಾಗುತ್ತಿದೆ. ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವ ನಾವು ನಿಧಾನವಾಗಿ ನಮ್ಮ ಮೂಲತನವನ್ನೇ ಕಳೆದುಕೊಳ್ಳುತ್ತಿದ್ದೇವೆ. ಆದರೆ ಹಳ್ಳಿಗಾಡಿನ ಮಕ್ಕಳ ಆಟವೆಂದೇ ಕರೆಯಲಾಗುತ್ತಿದ್ದ ಗಾಳಿಪಟ ತಯಾರಿ ಹಾಗು ಅದನ್ನು ಆಗಸಕ್ಕೆ ಹಾರಿಬಿಟ್ಟು ಅದು ಬಾನಂಗಳದಲ್ಲಿ ಹಾರಾಡುವುದನ್ನು ನೋಡಿ ಮಜಾ ತೆಗೆದುಕೊಳ್ಳುತಿದ್ದ ದಿನಗಳು ಮರೆಯಾಗುತ್ತಿವೆ. ಈಗ ಗಾಳಿಪಟಕ್ಕೂ ಅಂತಾರಾಷ್ಟ್ರೀಯ ಮನ್ನಣೆ, ಜಾಗತಿಕಮಟ್ಟದಲ್ಲಿ ಗಾಳಿಪಟಗಳನ್ನು ಹಾರಿಸುವ ಕಲೆಗಾರಿಕೆ ಜನಪ್ರಿಯವಾಗುತ್ತಿದೆ. ಇದಕ್ಕೆ ಸಾಕ್ಷಿಯಾಯಿತು ಪಣಂಬೂರು ಸಮುದ್ರ ಕಿನಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications