ರಾಜ್ಯದಲ್ಲಿ ಸದ್ಯವೇ ನೂತನ ಜಾಹೀರಾತು ನೀತಿ

ಪ್ರಸಕ್ತ ವರ್ಷದಿಂದ ಮೊಹರೆ ಹನುಮಂತರಾವ್ ಅವರ ಹೆಸರಿನಲ್ಲಿ 1 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡ ರಾಜ್ಯಮಟ್ಟದ ಪ್ರಶಸ್ತಿ ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತರ ಹಾಗೂ ಸಂಕಷ್ಟದಲ್ಲಿರುವ ಪತ್ರಕರ್ತರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ರೂಪಿಸಿದೆ ಎಂದು ಅವರು ಹೇಳಿದರು.
ಪತ್ರಕರ್ತರಿಗೆ ರಾಜ್ಯ ಸಾರಿಗೆ ಬಸ್ಗಳಲ್ಲಿ ಸಂಚರಿಸಲು ಸ್ಮಾರ್ಟ್ಕಾರ್ಡ್ ನೀಡುವ ವಿಚಾರ ಪರಿಶೀಲನೆಯಲ್ಲಿದೆ ಎಂದ ಅವರು ಪತ್ರಕರ್ತರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸರ್ಕಾರವನ್ನು ಹೆಚ್ಚು ಅವಲಂಬಿಸುವಂತಾಗಬಾರದು ಎಂದು ಕಿವಿಮಾತು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಬೇಕು ಎಂದು ಅವರು ಹೇಳಿದರು. ಜಾಹಿರಾತು ನೀತಿ ಹಾಗೂ ಸಿನಿಮಾ ನೀತಿ, ಕರಡು ಸಿದ್ದವಾಗಿದ್ದು ಸದ್ಯವೇ ಅಂತಿಮಗೊಳಿಸಲಾಗುವುದು ಎಂದರು.
ಟಿ.ಎನ್.ಸತ್ಯನ್ ಹೆಸರಿನಲ್ಲಿ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿಯನ್ನು ಹಿಂದೂ ಪತ್ರಿಕೆಯ ಛಾಯಾಗ್ರಾಹಕ ಶ್ರೀರಾಂ ಹಾಗೂ ಕನ್ನಡಪ್ರಭ ಪತ್ರಿಕೆ ವರದಿಗಾರ ಮಹೇಶ್ ಭಗೀರಥ ಅವರಿಗೆ ಪ್ರಧಾನ ಮಾಡಲಾಯಿತು. ಅಭಿವೃದ್ಧಿಶೀಲ ರಾಷ್ಟ್ರದಲ್ಲಿ ಜನಹಿತ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರ ಜವಾಬ್ದಾರಿ ಹೆಚ್ಚು ಇದೆ ಎಂದು ಶಾಸಕ ಶ್ರೀನಿವಾಸಪ್ರಸಾದ್ ಅಭಿಪ್ರಾಯಪಟ್ಟರು. ಸಂಸದ ವಿಶ್ವನಾಥ್, ಆಂದೋಲನ ಪತ್ರಿಕೆ ಸಂಪಾದಕ ರಾಜಶೇಖರಕೋಟಿ, ನಿವೃತ್ತ ಅರಣ್ಯಾಧಿಕಾರಿ ಜಯರಾಮ್, ಸಿದ್ದಾರ್ಥ ಹೋಟೆಲ್ ಮಾಲೀಕ ಶ್ರೀ ಗಿರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೈಸೂರುಮಿತ್ರ ಪತ್ರಿಕೆ ಸಂಪಾದಕ ಕೆ.ಬಿ.ಗಣಪತಿ ಅಧ್ಯಕ್ಷತೆ ವಹಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications