ರಾಜಕೀಯದಲ್ಲಿ ಭಾನುವಾರವೆಂಬುದೇ ಇಲ್ಲ!

ಬಿಜೆಪಿಯಲ್ಲಿ ಟಿಕೆಟ್ ಲಾಬಿ : ಫೆಬ್ರವರಿ 21ರಂದು ನಡೆಯಲಿರುವ ಬಿಬಿಎಂಪಿ ಚುನಾವಣೆ ಟಿಕೆಟಿಗಾಗಿ ಬಿಜೆಪಿಯಲ್ಲಿ ಲಾಬಿ ಶುರುವಾಗಿದೆ. ಟಿಕೆಟ್ ಆಕಾಂಕ್ಷಿಗಳು ಪೂಜೆ ಮಾಡಿಸುವ ನೆಪದಲ್ಲಿ ನಗರದ ಗಿರಿನಗರದಲ್ಲಿರುವ ರಾಮಚಂದ್ರಾಪುರದ ಮಠಕ್ಕೆ ಭೇಟಿ ನೀಡಿ ರಾಘವೇಶ್ವರ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ. ಚಿಕ್ಕಮಗಳೂರು ಶಾಸಕ ಸಿಟಿ ರವಿ ಕೂಡ ರಾಘವೇಶ್ವರ ಸ್ವಾಮೀಜಿಯನ್ನು ಭೇಟಿ ಮಾಡಿರುವುದು ಅನೇಕರ ಹುಬ್ಬೇರುವಂತೆ ಮಾಡಿದೆ. ಕೆಆರ್ ಪುರಂನ ಗಾಯತ್ರಿ ಚಂದ್ರಶೇಖರ್, ವಿಜಯನಗರದ ಕೃಷ್ಣಪ್ಪ ಮುಂತಾದವರು ಕೂಡ ಸ್ವಾಮೀಜಿಯನ್ನು ಭೇಟಿ ಮಾಡಿ ಟಿಕೆಟಿಗಾಗಿ ಲಾಬಿ ನಡೆಸಿದ್ದಾರೆ.
ಯಡಿಯೂರಪ್ಪ ನೇಕಾರ ನಾಯಕ : ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿಯಲ್ಲಿ ಇಂದು ನಡೆದ ನೇಕಾರ ಜನಾಂಗದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಅವರಿಗೆ ಬೆಳ್ಳಿ ಖಡ್ಗ ನೀಡಿ ಮತ್ತು 'ನೇಕಾರ ನಾಯಕ' ಎಂದು ಬಿರುದು ನೀಡಲಾಯಿತು. ಈ ಸಮಯದಲ್ಲಿ ಮಾತನಾಡಿದ ಯಡಿಯೂರಪ್ಪ, ದೇವಾಂಗ ಪೀಠಕ್ಕಾಗಿ ಮುಂದಿನ ಬಜೆಟ್ ನಲ್ಲಿ 4 ಕೋಟಿ ರು. ಮೀಸಲಿಡುವುದಾಗಿ ಹೇಳಿದರು ಮತ್ತು ದೇವಾಂಗ ಜನಾಂಗಕ್ಕೆ 10 ಉಪ-ಜನಾಂಗಗಳನ್ನು ಸೇರಿಸುವುದಾಗಿ ಭರವಸೆ ನೀಡಿದರು.
ಬಯೋಟೆಕ್ ಪಾರ್ಕ್ : ತೋಟಗಾರಿಕೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೆಳಗಾವಿ, ಶಿವಮೊಗ್ಗ, ಬೆಂಗಳೂರು, ಮೈಸುರು ಮತ್ತು ಬೀದರ್ ಸೇರಿದಂತೆ ರಾಜ್ಯದಲ್ಲಿ 12 ಹೊಸ ಬಯೋಟೆಕ್ ಪಾರ್ಕ್ ಗಳನ್ನು ನಿರ್ಮಿಸಲಾಗುವುದು ಎಂದು ತೋಟಗಾರಿಕಾ ಸಚಿವ ಉಮೇಶ ಕತ್ತಿ ಅವರು ಮೈಸೂರಿನಲ್ಲಿ ಘೋಷಿಸಿದ್ದಾರೆ. ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಅನುವಾಗುವಂತೆ ಮೈಸೂರು, ಹಾಸನ, ಮಂಡ್ಯ, ಹಾಸನ, ಚಾಮರಾಜನಗರ, ಕೆಆರ್ ನಗರಗಳಲ್ಲಿ ಹೂವು ಹರಾಜು ಮಾರುಕಟ್ಟೆಯನ್ನು ನಿರ್ಮಿಸುವುದಾಗಿ ಹೇಳಿದರು. ಮಾವು ಉತ್ಪನ್ನ ಹೆಚ್ಚಿಸುವ ಉದ್ದೇಶದಿಂದ ಕೋಲಾರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಮಾವು ಸಂಶೋಧನಾ ಕೇಂದ್ರ ನಿರ್ಮಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಬಿಜೆಪಿ ಸಮನ್ವಯ ಸಮಿತಿ : ಇಂದು ನಡೆಯುತ್ತಿರುವ ಬಿಜೆಪಿ ಸಮನ್ವಯ ಸಮಿತಿಯಲ್ಲಿ ನೂನತ ರಾಜ್ಯಾಧ್ಯಕ್ಷರ ಆಯ್ಕೆ, ಬಿಬಿಎಂಪಿ ಚುನಾವಣೆ, ತೆರವಾಗಿರುವ ವಿಧಾನಪರಿಷತ್ ಸ್ಥಾನಕ್ಕೆ ಅಭ್ಯರ್ಥಿಯ ಆಯ್ಕೆ, ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ, ಸಂಪುಟಕ್ಕೆ ಹೊಸಬರ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ಆಯ್ಕೆಯಾಗುವುದು ಹೆಚ್ಚೂ ಕಡಿಮೆ ಖಚಿತವಾಗಿದೆ. ಅವರ ಆಯ್ಕೆಯಿಂದ ಬರಿದಾಗುತ್ತಿರುವ ಇಂಧನ ಖಾತೆಗೆ ಯಾರನ್ನು ತರಬೇಕೆಂಬ ಬಗ್ಗೆಯೂ ಚರ್ಚೆ ನಡೆಯಲಿದೆ. ಈ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರು ಕೇಳಿಬರುತ್ತಿವೆ.
ಸಿದ್ದು ವಿರುದ್ಧ ಸದಾನಂದ ಗೌಡ ಕಿಡಿ : 'ಬಿಜೆಪಿ ಜುಟ್ಟು ಈಶ್ವರಪ್ಪ ಕೈಗೆ ಸಿಕ್ರೆ ಅಧೋಗತಿ' ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಕ್ಕೆ ಕೆರಳಿರುವ ಸದಾನಂದ ಗೌಡ, ಬಿಜೆಪಿ ಬಗ್ಗೆ ಚಿಂತನೆ ಇವರಿಗ್ಯಾಕೆ, ಇವರಿಗೆ ಜ್ಯೋತಿಷಿ ಪಟ್ಟ ಕೊಟ್ಟವರು ಯಾರು ಎಂದು ಮಂಗಳೂರಿನಲ್ಲಿ ನಗುಮೊಗದಲ್ಲೇ ಕೆಂಡಕಾರಿದ್ದಾರೆ. ಬಿಜೆಪಿ ಜುಟ್ಟು, ಜನಿವಾರ ಈಶ್ವರಪ್ಪ ಕೈಗೆ ಸಿಕ್ಕರೆ ಬಿಜೆಪಿ ಸರಕಾರದ ಪತನ ಶತಸಿದ್ಧ ಎಂದು ಸಿದ್ದು ಶನಿವಾರ ಲೇವಡಿಯಾಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications