ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಹೊರದಬ್ಬಲಿದೆ

ದಾಳಿ ಮಾಡುತ್ತಿರುವವರು ಆರೆಸ್ಸೆಸ್,ಹಿಂದೂ ಸಂಘಟನೆಗಳು, ಸರ್ಕಾರ ಇದುವರೆವಿಗೂ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಂಡಿಲ್ಲ.ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಆ ಭಾಗದ(ಮೈಸೂರು) ಪೊಲೀಸರು ನಿಷ್ಕ್ರಿಯರಾಗಿದ್ದಾರೆ. ಚರ್ಚ್ ದಾಳಿ ನಿರಂತರವಾಗಿ ನಡೆಯುತ್ತಿದ್ದರೂ ಒಬ್ಬನನ್ನು ಬಂಧಿಸಲು ಈ ಸರ್ಕಾರಕ್ಕೆ ತಾಕತ್ತಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಜನರ ರಕ್ಷಣೆಯಲ್ಲಿ ಸರ್ಕಾರ ವಿಫಲವಾಗಿದ್ದರೆ. ಜನ ಸಾಮಾನ್ಯರನ್ನು ರಾಜಕೀಯ ದಾಳ ಗಳನ್ನಾಗಿ ಉಪಯೋಗಿಸುತ್ತಿದ್ದಾರೆ. ಧಾರ್ಮಿಕ ಕೇಂದ್ರಗಳನ್ನು ರಕ್ಷಿಸಲು ಆಗದಿದ್ದರೆ, ಯೋಗ್ಯತೆ ಇಲ್ಲದಿದ್ದರೆ ಅಡಳಿತ ಬಿಟ್ಟು ತೊಲಗಿ ಎಂದು ಉಗ್ರಪ್ಪ ಕಿಡಿ ಕಾರಿದ್ದಾರೆ. ನಾಡಿನ ಜನತೆ ಈ ಸಂದರ್ಭದಲ್ಲಿ ಶಾಂತಿಯಿಂದ ವರ್ತಿಸಬೇಕು. ದುಷ್ಕರ್ಮಿಗಳ ಸಂಚಿಗೆ ಬಲಿಯಾಗಿ ಗಲಭೆ ಎಬ್ಬಿಸಬಾರದು ಎಂದು ಉಗ್ರಪ್ಪ ಕಿವಿಮಾತು ಹೇಳಿದರು.
ಡಿಕೆಶಿ ಕಿಡಿಕಿಡಿ: ಒಬ್ಬರನ್ನು ಬಂಧಿಸಿಲ್ಲ ಎಂದರೆ, ಸರ್ಕಾರ ಕೂಡ ದಾಳಿಗೆ ಸಹಾಯ ಮಾಡುತ್ತಿದೆ. ಆನೇಕಲ್, ಮಂಗಳೂರು, ದಾಳಿ ಪ್ರಕರಣ ಕಣ್ಮುಂದೆ ಇದೆ. ದಾಳಿ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ. ಸರ್ಕಾರ ಅಲ್ಪಸಂಖ್ಯಾತರನ್ನು ರಕ್ಷಿಸುವ ಭರವಸೆ ಇಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇಲ್ಲದಿದ್ದ ಚರ್ಚ್ ಮೇಲಿನ ದಾಳಿ ಬಿಜೆಪಿ ಆಡಳಿತಕ್ಕೆ ಬರುತ್ತಿದ್ದಂತೆ ಆರಂಭವಾಗಲು ಕಾರಣವೇನು ಎಂಬುದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಭಾನುವಾರದಂದು ಆನೇಕಲ್ ತಾಲೂಕಿನ ಹುಲಿಮಂಗಲ ಗ್ರಾಮದ ನಡುಬೀದಿ ತಿಮ್ಮಾರೆಡ್ಡಿ ಲೇಔಟ್ ನಲ್ಲಿ ಕ್ರಿಶ್ಚಿಯನ್ ಸಮುದಾಯ ಭಾನುವಾರ ಏರ್ಪಡಿಸಿದ್ದ ಭಾರತಕ್ಕಾಗಿ ಪ್ರಾರ್ಥನೆ' ಸಮಾರಂಭದಲ್ಲಿ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ ಕಾರಿದ್ದರು. ಕಾಂಗ್ರೆಸ್ ಸಮುದಾಯದ ಬೆಂಬಲಕ್ಕಿದ್ದು,ಎಲ್ಲ ಧರ್ಮ, ಜಾತಿ ಬಗ್ಗೆ ನಂಬಿಕೆ ಇಟ್ಟುಕೊಂಡಿದೆ. ಕ್ರೈಸ್ತರೊಡನೆ ಕಾಂಗ್ರೆಸ್ ಇದೆ ಎಂದು ಘೋಷಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications