ಸಂಸ್ಕೃತವನ್ನು ಉಳಿಸಿ ಬೆಳಸಿ: ಕಾಗೇರಿ

ಅನುದಾನದ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸಂಸ್ಕೃತ ಪ್ರಸಾರಕ್ಕೆ ಉತ್ತೇಜನ ನೀಡಲು ಹೆಚ್ಚು ಸಹಕಾರ ಕೊಡುವಂತೆ ಕೇಳಿಕೊಳ್ಳಲಾಗಿದೆ ಎಂದರು. ಸಂಸ್ಕೃತ ಪಾಠಶಾಲೆ, ಕಾಲೇಜುಗಳಿಗೆ ಗ್ರಂಥಾಲಯ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ನೀಡಲಾಗುವುದು. ಅಧ್ಯಾಪಕರಿಗೆ ಸೂಕ್ತ ತರಬೇತಿ ಕೊಡಲಾಗುವುದು. ಸಂಶೋಧನೆ, ಅಧ್ಯಯನಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಸಂಸ್ಕೃತದಲ್ಲಿ ಸಾಧನೆ ಮಾಡಿದವರನ್ನು ಅಭಿನಂದಿಸುವ ಈ ಘಟಕೋತ್ಸವ 7 ವರ್ಷ ನಡೆದಿರಲಿಲ್ಲ. ಬಿಜೆಪಿ ಸರಕಾರ ಬಂದಾಗಿನಿಂದ ಪುನರಾರಂಭ ಮಾಡಲಾಗಿದೆ. ಹೀಗಾಗಿ ಸತತ 2 ನೇ ಬಾರಿಗೆ ಈ ಸುಸಂದರ್ಭ ಒದಗಿ ಬಂದಿದೆ. ಸಂಸ್ಕೃತಕ್ಕಾಗಿ ನಿಧಿ ಸ್ಥಾಪಿಸಲು ಚಿಂತನೆ ನಡೆದಿದೆ. ಈಗಾಗಲೇ ವಿದ್ಯಾರ್ಥಿ ವೇತನವನ್ನು 45 ರೂ. ದಿಂದ 75 ರೂ. ಗೆ ಹೆಚ್ಚಿಸಲಾಗಿದೆ ಎಂದರು. ವಿದೇಶಿಯರು ಸಂಸ್ಕೃತ ಕಲಿಯಲು ಆಸಕ್ತಿ ತೋರುತ್ತಿದ್ದಾರೆ. ಸಂಸ್ಕೃತದಲ್ಲಿ ಎಲ್ಲ ಭಾಷೆಯ ಸತ್ವ, ತತ್ವಜ್ಞಾನ ಅಡಗಿದೆ. ಹೀಗಾಗಿ ಪಾಲಕರು ಮಕ್ಕಳನ್ನು ಈ ನಿಟ್ಟಿನಲ್ಲಿ ಅಣಿಗೊಳಿಸಬೇಕು ಎಂದರು.
ಕೈಲಾಸಾಶ್ರಮದ ಶ್ರೀ ಆದಿದೇವಾನಂದ ಸ್ವಾಮೀಜಿ ಮಾತನಾಡಿ, ಕೆಲವರು ಅನಗತ್ಯವಾಗಿ ಸಂಸ್ಕೃತವನ್ನು ವಿರೋಧಿಸುತ್ತಿದ್ದಾರೆ. ಇದರಿಂದ ಯಾವ ಸಾಧನೆ ಆಗುವುದಿಲ್ಲ. ಸಂಸ್ಕೃತ ಬೇಡ ಎನ್ನುವವರು ಉರ್ದು ವಿಶ್ವವಿದ್ಯಾಲಯಕ್ಕಾಗಿ ಸಲಹೆ ನೀಡಿದ್ದಾರೆ. ಈ ರೀತಿಯ ದ್ವಂದ್ವ ಏಕೆ ಎಂದು ಪ್ರಶ್ನಿಸಿದರು. ಒಟ್ಟು 114 ವಿದ್ಯಾರ್ಥಿಗಳಿಗೆ ಪದವಿ/ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ರ.ಗೋ. ನಡಾದೂರ ಪಾಲ್ಗೊಂಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications