ಸಂಸ್ಕೃತವನ್ನು ಉಳಿಸಿ ಬೆಳಸಿ: ಕಾಗೇರಿ

ಅನುದಾನದ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸಂಸ್ಕೃತ ಪ್ರಸಾರಕ್ಕೆ ಉತ್ತೇಜನ ನೀಡಲು ಹೆಚ್ಚು ಸಹಕಾರ ಕೊಡುವಂತೆ ಕೇಳಿಕೊಳ್ಳಲಾಗಿದೆ ಎಂದರು. ಸಂಸ್ಕೃತ ಪಾಠಶಾಲೆ, ಕಾಲೇಜುಗಳಿಗೆ ಗ್ರಂಥಾಲಯ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ನೀಡಲಾಗುವುದು. ಅಧ್ಯಾಪಕರಿಗೆ ಸೂಕ್ತ ತರಬೇತಿ ಕೊಡಲಾಗುವುದು. ಸಂಶೋಧನೆ, ಅಧ್ಯಯನಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಸಂಸ್ಕೃತದಲ್ಲಿ ಸಾಧನೆ ಮಾಡಿದವರನ್ನು ಅಭಿನಂದಿಸುವ ಈ ಘಟಕೋತ್ಸವ 7 ವರ್ಷ ನಡೆದಿರಲಿಲ್ಲ. ಬಿಜೆಪಿ ಸರಕಾರ ಬಂದಾಗಿನಿಂದ ಪುನರಾರಂಭ ಮಾಡಲಾಗಿದೆ. ಹೀಗಾಗಿ ಸತತ 2 ನೇ ಬಾರಿಗೆ ಈ ಸುಸಂದರ್ಭ ಒದಗಿ ಬಂದಿದೆ. ಸಂಸ್ಕೃತಕ್ಕಾಗಿ ನಿಧಿ ಸ್ಥಾಪಿಸಲು ಚಿಂತನೆ ನಡೆದಿದೆ. ಈಗಾಗಲೇ ವಿದ್ಯಾರ್ಥಿ ವೇತನವನ್ನು 45 ರೂ. ದಿಂದ 75 ರೂ. ಗೆ ಹೆಚ್ಚಿಸಲಾಗಿದೆ ಎಂದರು. ವಿದೇಶಿಯರು ಸಂಸ್ಕೃತ ಕಲಿಯಲು ಆಸಕ್ತಿ ತೋರುತ್ತಿದ್ದಾರೆ. ಸಂಸ್ಕೃತದಲ್ಲಿ ಎಲ್ಲ ಭಾಷೆಯ ಸತ್ವ, ತತ್ವಜ್ಞಾನ ಅಡಗಿದೆ. ಹೀಗಾಗಿ ಪಾಲಕರು ಮಕ್ಕಳನ್ನು ಈ ನಿಟ್ಟಿನಲ್ಲಿ ಅಣಿಗೊಳಿಸಬೇಕು ಎಂದರು.
ಕೈಲಾಸಾಶ್ರಮದ ಶ್ರೀ ಆದಿದೇವಾನಂದ ಸ್ವಾಮೀಜಿ ಮಾತನಾಡಿ, ಕೆಲವರು ಅನಗತ್ಯವಾಗಿ ಸಂಸ್ಕೃತವನ್ನು ವಿರೋಧಿಸುತ್ತಿದ್ದಾರೆ. ಇದರಿಂದ ಯಾವ ಸಾಧನೆ ಆಗುವುದಿಲ್ಲ. ಸಂಸ್ಕೃತ ಬೇಡ ಎನ್ನುವವರು ಉರ್ದು ವಿಶ್ವವಿದ್ಯಾಲಯಕ್ಕಾಗಿ ಸಲಹೆ ನೀಡಿದ್ದಾರೆ. ಈ ರೀತಿಯ ದ್ವಂದ್ವ ಏಕೆ ಎಂದು ಪ್ರಶ್ನಿಸಿದರು. ಒಟ್ಟು 114 ವಿದ್ಯಾರ್ಥಿಗಳಿಗೆ ಪದವಿ/ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ರ.ಗೋ. ನಡಾದೂರ ಪಾಲ್ಗೊಂಡಿದ್ದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications