ದೇಶಾದ್ಯಂತ ಸಡಗರ, ಸಂಭ್ರಮದಿಂದ ಗಣತಂತ್ರ

ಉಗ್ರರು ದಾಳಿ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಕೊಟ್ಟ ಮಾಹಿತಿಯ ಹಿನ್ನೆಯಲ್ಲಿ ದೇಶದಾದ್ಯಂತ ಇಂದು ಕಟ್ಟೆಚ್ಚರ ವಹಿಸಲಾಗಿತ್ತು. ಉಗ್ರರು ದಾಳಿಯನ್ನು ಎದುರಿಸಲು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್ ಎಸ್ ಜಿ) ದೇಶಾದ್ಯಂತ ಹದ್ದ್ದಿನ ಕಣ್ಣಿಟ್ಟಿದೆ.
ನವದೆಹಲಿಯ ವಿಜಯ್ ಚೌಕ್ ಮತ್ತು ಕೆಂಪುಕೋಟೆಯ ಎಂಟು ಕಿ.ಮೀ ಮಾರ್ಗದಲ್ಲಿ 15 ಸಾವಿರ ಮಂದಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಭೂ ಮತ್ತು ವಾಯುಮಾರ್ಗದ ದಾಳಿಯನ್ನು ಎದುರಿಸಲು ಎಲ್ಲಾ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿತ್ತು.
ಭದ್ರತಾ ಏರ್ಪಾಟುಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ದೆಹಲಿ ಪೊಲೀಸ್ ಕಮೀಷನರ್ ವೈ ಎಸ್ ಯಾದವ್, ಜನವರಿ 25ರ ಸೋಮವಾರ 192 ಪೊಲೀಸ್ ಕಂಪನಿಗಳನ್ನು ಹಾಗೂ ಅರೆಸೇನಾ ಸಿಬ್ಬಂದಿಯನ್ನು ಪರೇಡ್ ಮಾರ್ಗದಲ್ಲಿ ನಿಯೋಜಿಸಲಾಗಿತ್ತು ಎಂದು ತಿಳಿಸಿದರು.
ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಇಡಲಾಗಿತ್ತು. ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ, ಜನ ದಟ್ಟಣೆ ಇರುವ ಮಾರುಕಟ್ಟೆಯಂತಹ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿತ್ತು ಎಂದು ಯಾದವ್ ವಿವರ ನೀಡಿದರು. ಭದ್ರತಾ ಕ್ರಮಗಳ ಜೊತೆಗೆ ಮೆಟ್ರೊ ರೈಲು ಪ್ರಯಾಣವನ್ನು ನಿಲ್ಲಿಸಲಾಗಿತ್ತು. ಇಂದಿರಾಗಾಂಧಿ ಹಾಗೂ ಪಾಲಂ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.
ಈ ಬಾರಿಯ ಗಣತಂತ್ರ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ದಕ್ಷಿಣ ಕೊರಿಯಾದ ಅಧ್ಯಕ್ಷ ಲೀಮ್ಯಾಂಗ್ ಆಗಮಿಸಿದ್ದರು. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಅನೇಕ ರಾಜಕಾರಣಿಗಳು 60ನೇ ಗಣತಂತ್ರ ದಿನಾಚರಣೆಯನ್ನು ಕಣ್ತುಂಬಿಕೊಂಡರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications