Get Updates
Get notified of breaking news, exclusive insights, and must-see stories!

ದೇಶಾದ್ಯಂತ ಸಡಗರ, ಸಂಭ್ರಮದಿಂದ ಗಣತಂತ್ರ

India celebrates 61st republic day
ನವದೆಹಲಿ, ಜ.26: ಅರವತ್ತನೆಯ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಭಾರತ ಜವರಿ 26ರ ಮಂಗಳವಾರ ಆಚರಿಸಿಕೊಂಡಿತು. ಭಯೋತ್ಪಾದಕರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿತ್ತು.

ಉಗ್ರರು ದಾಳಿ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಕೊಟ್ಟ ಮಾಹಿತಿಯ ಹಿನ್ನೆಯಲ್ಲಿ ದೇಶದಾದ್ಯಂತ ಇಂದು ಕಟ್ಟೆಚ್ಚರ ವಹಿಸಲಾಗಿತ್ತು. ಉಗ್ರರು ದಾಳಿಯನ್ನು ಎದುರಿಸಲು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್ ಎಸ್ ಜಿ) ದೇಶಾದ್ಯಂತ ಹದ್ದ್ದಿನ ಕಣ್ಣಿಟ್ಟಿದೆ.

ನವದೆಹಲಿಯ ವಿಜಯ್ ಚೌಕ್ ಮತ್ತು ಕೆಂಪುಕೋಟೆಯ ಎಂಟು ಕಿ.ಮೀ ಮಾರ್ಗದಲ್ಲಿ 15 ಸಾವಿರ ಮಂದಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಭೂ ಮತ್ತು ವಾಯುಮಾರ್ಗದ ದಾಳಿಯನ್ನು ಎದುರಿಸಲು ಎಲ್ಲಾ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿತ್ತು.

ಭದ್ರತಾ ಏರ್ಪಾಟುಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ದೆಹಲಿ ಪೊಲೀಸ್ ಕಮೀಷನರ್ ವೈ ಎಸ್ ಯಾದವ್, ಜನವರಿ 25ರ ಸೋಮವಾರ 192 ಪೊಲೀಸ್ ಕಂಪನಿಗಳನ್ನು ಹಾಗೂ ಅರೆಸೇನಾ ಸಿಬ್ಬಂದಿಯನ್ನು ಪರೇಡ್ ಮಾರ್ಗದಲ್ಲಿ ನಿಯೋಜಿಸಲಾಗಿತ್ತು ಎಂದು ತಿಳಿಸಿದರು.

ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಇಡಲಾಗಿತ್ತು. ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ, ಜನ ದಟ್ಟಣೆ ಇರುವ ಮಾರುಕಟ್ಟೆಯಂತಹ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿತ್ತು ಎಂದು ಯಾದವ್ ವಿವರ ನೀಡಿದರು. ಭದ್ರತಾ ಕ್ರಮಗಳ ಜೊತೆಗೆ ಮೆಟ್ರೊ ರೈಲು ಪ್ರಯಾಣವನ್ನು ನಿಲ್ಲಿಸಲಾಗಿತ್ತು. ಇಂದಿರಾಗಾಂಧಿ ಹಾಗೂ ಪಾಲಂ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

ಈ ಬಾರಿಯ ಗಣತಂತ್ರ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ದಕ್ಷಿಣ ಕೊರಿಯಾದ ಅಧ್ಯಕ್ಷ ಲೀಮ್ಯಾಂಗ್ ಆಗಮಿಸಿದ್ದರು. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಅನೇಕ ರಾಜಕಾರಣಿಗಳು 60ನೇ ಗಣತಂತ್ರ ದಿನಾಚರಣೆಯನ್ನು ಕಣ್ತುಂಬಿಕೊಂಡರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+