ಬಳ್ಳಾರಿಯಲ್ಲಿ ಕಟ್ಟಡ ಕುಸಿತ; 4 ಮಂದಿ ಸಾವು
ಬಳ್ಳಾರಿ,
ಜ.27: ಗಾಂಧಿನಗರದ 2ನೇ ಕ್ರಾಸ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡವೊಂದು ಬಾಲಕರ ಹಾಸ್ಟಲ್ ಕಟ್ಟಡದ ಮೇಲೆ ಬಿದ್ದ ಪರಿಣಾಮ 4 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಹಲವರ ಪರಿಸ್ಥಿತಿ ಚಿಂತಾಜನಕವಾಗಿದೆ. ಕಟ್ಟಡದ ಅವಶೇಷಗಳಡಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಲುಕಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯ ಚುರುಕಿನಿಂದ ನಡೆಯುತ್ತಿದೆ. id="toptextpromo">ಗಾಯಗೊಂಡ
ವಿದ್ಯಾರ್ಥಿಗಳನ್ನು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳ, ಪೊಲೀಸರು ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಪೂನಾದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾರ್ಯಪಡೆ ಸಹ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ನಿರತವಾಗಲಿದೆ. id='are-slot-1' class='oiad oi-axt oiadv'> id='top-searched-articles'>ಕಟ್ಟಡ
ಮಾಲೀಕ ಸೋಮಶೇಖರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 3 ಅಂತಸ್ತಿನ ಕಟ್ಟಡ ಕಟ್ಟಲು ಮಾತ್ರ ಅನುಮತಿ ನೀಡಲಾಗಿತ್ತು. ಆದರೆ ಸೋಮಶೇಖರ್ ನಿಯಮ ಮೀರಿ 6 ಅಂತಸ್ತಿನ ಕಟ್ಟಡ ನಿರ್ಮಿಸಿದ್ದರು ಎನ್ನಲಾಗಿದೆ. ಹಾಗೆಯೇ ಪಾಲಿಕೆ ಎಂಜಿನಿಯರ್ ಗಳಾದ ದೇವರಾಜ್ ಮತ್ತ್ತು ಫಿರೋಜ್ ಅವರನ್ನು ಅಮಾನತು ಮಾಡಲಾಗಿದೆ.











Click it and Unblock the Notifications