For Daily Alerts
ಬಳ್ಳಾರಿಯಲ್ಲಿ ಕಟ್ಟಡ ಕುಸಿತ; 4 ಮಂದಿ ಸಾವು
ಗಾಯಗೊಂಡ ವಿದ್ಯಾರ್ಥಿಗಳನ್ನು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳ, ಪೊಲೀಸರು ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಪೂನಾದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾರ್ಯಪಡೆ ಸಹ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ನಿರತವಾಗಲಿದೆ.
ಕಟ್ಟಡ ಮಾಲೀಕ ಸೋಮಶೇಖರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 3 ಅಂತಸ್ತಿನ ಕಟ್ಟಡ ಕಟ್ಟಲು ಮಾತ್ರ ಅನುಮತಿ ನೀಡಲಾಗಿತ್ತು. ಆದರೆ ಸೋಮಶೇಖರ್ ನಿಯಮ ಮೀರಿ 6 ಅಂತಸ್ತಿನ ಕಟ್ಟಡ ನಿರ್ಮಿಸಿದ್ದರು ಎನ್ನಲಾಗಿದೆ. ಹಾಗೆಯೇ ಪಾಲಿಕೆ ಎಂಜಿನಿಯರ್ ಗಳಾದ ದೇವರಾಜ್ ಮತ್ತ್ತು ಫಿರೋಜ್ ಅವರನ್ನು ಅಮಾನತು ಮಾಡಲಾಗಿದೆ.