ಆಪತ್ತು ನಿರ್ವಹಣೆ : ನಮ್ಮಲ್ಲೆಷ್ಟಿದೆ ಜಾಗೃತಿ?

ಕಳೆದ ವರ್ಷ ಬೆಂಗಳೂರಿನಲ್ಲಿ ಅಭಿಷೇಕ್ ಎಂಬ ಬಾಲಕ ಕೊಚ್ಚಿಹೋಗಿದ್ದು, ಉತ್ತರ ಕರ್ನಾಟಕದಲ್ಲಿ ಉಂಟಾದ ಅತಿವೃಷ್ಟಿಗಳು ನಮ್ಮ ಸ್ಮೃತಿಪಟಲದಿಂದ ಇನ್ನೂ ಅಳಿಸಿಹೋಗಿಲ್ಲ. ನಿನ್ನೆ ರಾತ್ರಿ ಬಳ್ಳಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಆರು ಮಹಡಿಯ ಕಟ್ಟಡ ಕುಸಿತ ಉಂಟಾಗಿದೆ. ಕಟ್ಟಡದ ಅಡಿಯಲ್ಲಿ ಸಿಲುಕಿರುವ 40ಕ್ಕೂ ಹೆಚ್ಚಿನ ಜನರನ್ನು ರಕ್ಷಣಾ ಪಡೆ ಹರಸಾಹಸ ಪಡುತ್ತಿದೆ. ಆಪತ್ತು ನಿರ್ವಹಣೆಯಲ್ಲಿ ನಾವೆಷ್ಟು ಹಿಂದಿದ್ದೇವೆ ಎಂಬುದಕ್ಕೆ ಈ ಘಟನೆ ಕೂಡ ಸಾಕ್ಷಿ.
ಇಂಥ ಆಪತ್ತುಗಳು ಮೇಲಿಂದ ಮೇಲೆ ಸಂಭವಿಸುತ್ತಲೇ ಇರುತ್ತವೆ. ಆಪತ್ತು ನಿರ್ವಹಣೆಗಾಗಿ ಕೂಡ ಅನೇಕ ಸರಕಾರಿ, ಸರಕಾರೇತರ, ಖಾಸಗಿ ಸಂಘ ಸಂಸ್ಥೆಗಳು ಕಾರ್ಯಪ್ರವೃತ್ತವಾಗಿರುತ್ತವೆ. ಆದರೆ, ಅನಾಹುತದ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಸೂಕ್ತ ದಾರಿ ಕಂಡುಕೊಳ್ಳಬೇಕಿದೆ, ಪರಿಣಾಮಕಾರಿದ ಚರ್ಚೆ ನಡೆಯಬೇಕಿದೆ. ಆಪತ್ತು ನಿರ್ವಹಣೆಯ ಕುರಿತು ಸರಕಾರ, ನಾಗರಿಕರು ಕೂಡ ಜಾಗೃತರಾಗಬೇಕಿದೆ.
ಇದಕ್ಕಾಗಿಯೇ, ಆಪತ್ತು ನಿರ್ವಹಣೆಯ ಕುರಿತು ಜನಜಾಗೃತಿ ಮೂಡಿಸಲು ನಾಗರಿಕ ರಕ್ಷಣಾ ಪಡೆ ಜನೆವರಿ 29, ಶುಕ್ರವಾರ ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿರುವ ಮಿನಸ್ಕ್ ವೃತ್ತದಲ್ಲಿ ಬೃಹತ್ ರ್ಯಾಲಿ ಆಯೋಜಿಸಿದೆ. ಬೆಳಿಗ್ಗೆ 7.30ಕ್ಕೆ ಜರುಗಲಿರುವ ಈ ರ್ಯಾಲಿಯಲ್ಲಿ ನಾಗರಿಕ ರಕ್ಷಣಾ ಪಡೆಯ ಸಿಬ್ಬಂದಿಗಳು, ಸ್ವಯಂಸೇವಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಎಂಥದೇ ಆಪತ್ತು ಘಟಿಸಿದಾಗ ನಮ್ಮನ್ನು ನಾವು ಆಪತ್ತು ನಿರ್ವಹಣೆಗೆ ಹೇಗೆ ಸಿದ್ಧಗೊಳ್ಳಬೇಕು ಎಂಬ ಬಗ್ಗೆ ತಿಳಿವಳಿಕೆ ನೀಡಲಿದ್ದಾರೆ ನಾಗರಿಕ ರಕ್ಷಣಾ ಸಿಬ್ಬಂದಿಗಳು.
ಇದರಲ್ಲಿ ನಾಗರಿಕರು ಭಾಗವಹಿಸಿ ಆಪತ್ತು ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕೆಂದು ಆಯೋಜಕರು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಶ್ರುತಿ (09743017637)
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications