ವಿಜಯನಗರ ಪುನರ್ ನಿರ್ಮಾಣಕ್ಕೆ ಅಡ್ವಾಣಿ ಶಿಲಾನ್ಯಾಸ
ಹಂಪೆ (ಕಮಲಾಪುರ), ಜ. 29- "ವರ್ತಮಾನವನ್ನು ಸಮೃದ್ಧಗೊಳಿಸಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಭವಿಷ್ಯತ್ ಕಾಲದ ಘಟನೆಗಳು ಪ್ರೇರಣೆ ನೀಡುತ್ತವೆ ಎಂದು ಮಾಜಿ ಉಪ ಪ್ರಧಾನಿ ಸಂಸದ ಎಲ್. ಕೆ. ಆಡ್ವಾಣಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಜಯನಗರ ಪುನಶ್ಚೆನ ಪ್ರತಿಷ್ಠಾನದ ಆಶ್ರಯದಲ್ಲಿ ಪ್ರಕಲ್ಪಗಳ ಭೂಮಿಪೂಜೆ ಹಾಗೂ ಕಟ್ಟಡಗಳ ಶಿಲಾನ್ಯಾಸವನ್ನು ಶುಕ್ರವಾರ ನೆರವೇರಿಸಿ ಮಾತನಾಡಿದ ಅವರು, ಶ್ರೀಕೃಷ್ಣದೇವರಾಯನ ಆಡಳಿತ ಅನುಕರಣೀಯ ಎಂದ ಹೇಳಿದರು.
ಕರ್ನಾಟಕಕ್ಕೂ ಮತ್ತು ನನಗೂ ಅವಿನಾಭಾವ ಸಂಬಂಧ ಇದೆ. ಹಂಪೆಗೆ ಎರಡನೇಬಾರಿ ಭೇಟಿ ನೀಡುತ್ತಿದ್ದೆನೆ. ಕಳೆದ ಬಾರಿ ನಾನು ಹಂಪೆಗೆ ಭೇಟಿ ನೀಡಿದಾಗ ಶ್ರೀಕೃಷ್ಣದೇವರಾಯ ಪಟ್ಟಾಭಿಷೇಕದ 500ನೇ ವರ್ಷಾಚರಣೆಯ ಮಹೋತ್ಸವಕ್ಕೆ ನನ್ನನ್ನು ಆಹ್ವಾನಿಸಿದ್ದರು ನಾನು ವಚನ ಪಾಲಿಸಿ, ಆಗಮಿಸಿದ್ದೆ ಎಂದು ಹೇಳಿದರು.ವಿಜಯನಗರ ಸಾಮ್ರಾಜ್ಯದ ಮಾಹಿತಿಯನ್ನು ಬಿಂಬಿಸುವ ಥೀಮ್ ಪಾರ್ಕ್ ' ನಿರ್ಮಾಣ ಆಗುತ್ತಿರುವುದು ಹಾಗೂ ಈ ಸಾಮ್ರಾಜ್ಯದ ವೈಭವ ನೆನಪಿಸುವ ಚಟುವಟಿಕೆಗಳು ಇಲ್ಲಿ ನಡೆಯುತ್ತಿರುವುದು ಸಂತೋಷದ ಸಂಗತಿ ಎಂದು ಅವರು ಹೇಳಿದರು.
ತಾವು ಕೇಂದ್ರ ವಾರ್ತಾ ಹಾಗೂ ಪ್ರಸಾರ ಸಚಿವರಾಗಿದ್ದಾಗ ಶ್ರೀಕೃಷ್ಣದೇವರಾಯರ ಧ್ವನಿ ಮತ್ತು ಬೆಳಕಿನ ಕಾರ್ಯಕ್ರಮವನ್ನು ರೂಪಿಸಿದ್ದನ್ನು ಸ್ಮರಿಸಿದ ಅವರು, ಈ ಪ್ರದರ್ಶನ ಹೈದರಾಬಾದ್ನಲ್ಲಿ ಪ್ರಯೊ ಆಗಿದ್ದನ್ನು ಪ್ರಸ್ತಾಪಿಸಿ ವಿಜಯನಗರದ ರಾಜಧಾನಿ ಕರ್ನಾಟಕದ ಹಂಪೆಯಲ್ಲೂ ಕೂಡ ಪ್ರದರ್ಶನಗೊಳ್ಳಬೇಕು ಎಂದು ಸಲಹೆ ನೀಡಿದ್ದಾಗಿ ಹೇಳಿದರು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮಾತನಾಡಿ, ವಿಜಯನಗರ ಸಾಮ್ರಾಜ್ಯದ ಭವ್ಯತೆಯ ಪುನರ್ದರ್ಶನಕ್ಕಾಗಿ ಈ ಸಾಮ್ರಾಜ್ಯದ ಚಟುವಟಿಕೆಗಳನ್ನು ಜನರಿಗೆ ತಿಳಿಸಲು ಕರ್ನಾಟಕ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ವಿಜಯನಗರ ಪುನಶ್ಚೆನ ಪ್ರತಿಷ್ಠಾನ (ಟ್ರಟ್ಸ್ ಸ್ಥಾಪಿಸಿದ್ದು ವೈಯಕ್ತಿಕವಾಗಿ ಸಾರ್ಥಕತೆ - ತೃಪ್ತಿ ಮೂಡಿಸಿದೆ ಎಂದರು. ಈ ಪ್ರತಿಷ್ಠಾನದ ಚಟುವಟಿಕೆಗಳಿಗೆ ಕೂಡಲೇ ಐದು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಪ್ರತಿಷ್ಠಾನ ತನ್ನ ಕ್ರಿಯಾ ಯೊನೆಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ ಮುಂದಿನ ಆಯವ್ಯಯದಲ್ಲಿ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಪಟ್ಟಾಭಿಷೇಕ ಮಹೋತ್ಸವ ಸಮಿತಿಯ ಕಾರ್ಯದರ್ಶಿ ವಿ. ನಾಗರಾಜ್ ಅವರು ಮಾತನಾಡಿ, ಅಕ್ಷರ ಧಾಮದ ಮಾದರಿಯಲ್ಲಿ ವಿಜಯನಗರ ವೈಭವದ ಪ್ರತಿಕೃತಿಗಳಲ್ಲದೆ ಸಂಶೋಧನೆ ಉದ್ಯಾನವನ ಮಲ್ಟಿ ಮೀಡಿಯಾ ಪ್ರದರ್ಶನ ಪುಸ್ತಕ ಹಾಗೂ ವಸ್ತು ಸಂಗ್ರಹಾಲಯವನ್ನು ಇಲ್ಲಿ ನಿರ್ಮಿಸಲಾಗುವುದು ಇದಕ್ಕಾಗಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅಗತ್ಯ ನೆರವು ಪಡೆಯಲಾಗಿದೆ ಎಂದರು
ಶ್ರಿ ರವಿಶಂಕರ್ ಗುರೂಜಿ ಅವರು ಸಾನಿಧ್ಯವಹಿಸಿದ್ದರು ಸಂಸದ ಅನಂತ ಕುಮಾರ್, ಸಚಿವರಾದ ಜಿ. ಕರುಣಾಕರ ರೆಡ್ಡಿ ಜಿ. ಜನಾರ್ದನ ರಡ್ಡಿ ಬಿ. ಶ್ರೀರಾಮುಲು ವಿಶ್ವೇಶ್ವರಹೆಗಡೆ ಕಾಗೇರಿ, ಸಂಸದೆ ಜೆ. ಶಾಂತ ಶಾಸಕರಾದ ಆನಂದ್ ಸಿಂಗ್ ಸುರೇಶ್ ಬಾಬು, ಮೃತ್ಯುಂಜಯ ಜಿನಗಾ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎನ್. ರುದ್ರಗೌಡ ಈ ಸಮಾರಂಭದಲ್ಲಿ ಇದ್ದರು. ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಸ್ವಾಗತಿಸಿದರು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎ. ಮುರಿಗೆಪ್ಪ ವಂದಿಸಿದರು
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications