'ನಗುವೇ ನಿಜವಾದ ಜಾತ್ಯತೀತ ಪಕ್ಷ'

ಶ್ರೀಕೃಷ್ಣದೇವರಾಯ ಪಟ್ಟಾಭಿಷೇಕದ 500ನೇ ವರ್ಷಾಚರಣೆ ಜನೋತ್ಸವದ ಎರಡನೇ ದಿನವಾದ ಗುರುವಾರ ಜರುಗಿದ ಹಾಸ್ಯಗೋಷ್ಠಿಯಲ್ಲಿ ನಾಡಿನ ಖ್ಯಾತ ಹಾಸ್ಯ ಕಲಾವಿದರಾದ ರಿಚರ್ಡ್ ಲೂಯಿಸ್, ಬಿ. ಪ್ರಾಣೇಶ್ ಹಾಗೂ ಎಂ.ಎಸ್. ನರಸಿಂಹಮೂರ್ತಿ ಅವರು ಹಾಸ್ಯ ಚಟಾಕಿಗಳ ಮೂಲಕ ನಗೆ ಪಟಾಕಿಯನ್ನೇ ಸಿಡಿಸಿದರು.
ಒಬ್ಬೊಬ್ಬರು ಒಂದೊಂದು ನಗೆ ಪ್ರಸಂಗವನ್ನು ಪ್ರಸ್ತಾಪಿಸತ್ತಿದ್ದಂತೆಯೇ ಜನ ನಕ್ಕಿದ್ದೇ ನಕ್ಕಿದ್ದು. ಜನರ ಪ್ರತಿಕ್ರಿಯೆಯಿಂದ ಉತ್ತೇಜನಗೊಂಡ ಈ ಕಲಾವಿದರ ಹಾಸ್ಯ ಪ್ರವಾಹದಲ್ಲಿ ಸಮಯ ಸರಿದದ್ದೇ ಗೊತ್ತಾಗಲಿಲ್ಲ. ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ನಗೆಯ ಅಲೆಗಳ ಜಾತ್ರೆಯಲ್ಲಿ ಅಸಂಖ್ಯ ಪ್ರೇಕ್ಷಕರು ನಗೆಗಡಲಲ್ಲಿ ಮಿಂದರು.
'ಕೃಷ್ಣದೇವರಾಯ ಬಿದಿಗೆ ಚಂದ್ರಮ'
ಶ್ರೀ ಕೃಷ್ಣದೇವರಾಯನ ಆಸ್ಥಾನದ ವಿದೂಷಕ ತೆನಾಲಿ ರಾಮಕೃಷ್ಣ ಮೊಘಲರ ದರ್ಬಾರಿನಲ್ಲಿ ವಿಜಯನಗರದ ಅರಸ ಕೃಷ್ಣದೇವರಾಯರನ್ನು ಬಿದಿಗೆಯ ಚಂದ್ರಮನೆಂದು ಬಣ್ಣಿಸಿದರಂತೆ. ಅದಕ್ಕೆ ರಾಜನ ಆಸ್ಥಾನಿಕರು ಆತನನ್ನು ಹೀಗಳೆದರಂತೆ. ತಕ್ಷಣವೇ ತೆನಾಲಿ ರಾಮಕೃಷ್ಣ , 'ಹುಣ್ಣಿಮೆ ಚಂದ್ರ ದಿನಗಳೆದಂತೆ ಕ್ಷೀಣವಾಗಿ ಅಮಾವಾಸ್ಯೆಯಂದು ಇಲ್ಲವಾಗುತ್ತಾನೆ. ಆದರೆ ಬಿದಿಗೆಯ ಚಂದ್ರ ದಿನೇ ದಿನೇ ಪ್ರವರ್ಧಮಾನನಾಗಿ, ಹುಣ್ಣಿಮೆಯಂದು ಹಾಲ ಬೆಳದಿಂಗಳು ಚೆಲ್ಲುತ್ತಾನೆಂದು ಪ್ರತ್ಯುತ್ತರ ನೀಡಿದನು. ಆತನ ಜಾಣ್ಮೆಗೆ ಎಲ್ಲರೂ ತಲೆದೂಗಿದರಂತೆ' ಎಂದು ಎಂ.ಎಸ್. ನರಸಿಂಹಮೂರ್ತಿ ಅವರು ಹೇಳಿದಾಗ ನೆರೆದ ಜನ ಸಮೂಹವೂ ತಲೆದೂಗಿತು.
ರಿಚರ್ಡ್ ಲೂಯಿಸ್ ಅವರು ಹೊಸಪೇಟೆಯ 'ಮೈನ್ಸ್, ವೈನ್ಸ್ ಮತ್ತು ಫೈ(ನಾ)ನ್ಸ್' ಬಗ್ಗೆ ವಿಡಂಬನಾತ್ಮಕವಾಗಿ ಮಾತನಾಡಿದರಲ್ಲದೆ, ಇಲ್ಲಿನ ಸೊಳ್ಳೆಗಳ ಜಾಣ್ಮೆಯನ್ನು ಕೊಂಡಾಡಿದರು. ಹಾಸ್ಯವನ್ನೇ ಪ್ರಾಣವಾಗಿಸಿಕೊಂಡ ಗಂಗಾವತಿಯ ಬಿ. ಪ್ರಾಣೇಶ್, ಮಕ್ಕಳಿಗೆ ಒತ್ತಡ ಹೇರಿ ಓದಿಸುವುದರ ವಿರುದ್ಧ ನಗೆಚಾಟಿ ಬೀಸಿದರು. ಒಂದು ಎರಡು ರ್ಯಾಂಕ್ ಬರುವ ಡಿಗ್ರಿಯನ್ನು ಲೇವಡಿ ಮಾಡುತ್ತ, ಅಂತಹವರಿಗೆ 108 ಡಿಗ್ರಿ ಹೊಂದಿರುವ ಥರ್ಮಾಮೀಟರ್ ನೀಡಿ ಸನ್ಮಾನಿಸಬಾರದೇಕೆ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಪ್ರೇಕ್ಷಕ ಸಮೂಹವನ್ನು ಕೊನೆಯವರೆಗೂ ಹಿಡಿದಿಡುವಲ್ಲಿ ಯಶಸ್ವಿಯಾದ ಈ ಹಾಸ್ಯಗೋಷ್ಠಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಉದ್ಘಾಟಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ, ಆರೋಗ್ಯಕರ ಸಮಾಜಕ್ಕೆ ಆರೋಗ್ಯಕರ ಹಾಸ್ಯ ಒಳಿತನ್ನೇ ಮಾಡುತ್ತದೆ. ಎಲ್ಲ ವಯೋಮಾನಕ್ಕೆ ಒಪ್ಪುವ ಹಾಸ್ಯ ಒಳ್ಳೆಯ ಅಭಿರುಚಿ ಮೂಡಿಸುವುದು. ಹಾಸ್ಯವು ನಗೆಗಷ್ಟೇ ಸೀಮಿತವಾಗದೆ, ಸಮಾಜದಲ್ಲಿ ಜಾಗೃತಿಗೆ ಮುಂದಾಗಬೇಕೆಂದು ಅಭಿಪ್ರಾಯಪಟ್ಟರು. ಅನಿಲ್ ದೇಸಾಯಿ ಅವರು ಕಾರ್ಯಕ್ರಮ ನಿರೂಪಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications