'ನಗುವೇ ನಿಜವಾದ ಜಾತ್ಯತೀತ ಪಕ್ಷ'

ಶ್ರೀಕೃಷ್ಣದೇವರಾಯ ಪಟ್ಟಾಭಿಷೇಕದ 500ನೇ ವರ್ಷಾಚರಣೆ ಜನೋತ್ಸವದ ಎರಡನೇ ದಿನವಾದ ಗುರುವಾರ ಜರುಗಿದ ಹಾಸ್ಯಗೋಷ್ಠಿಯಲ್ಲಿ ನಾಡಿನ ಖ್ಯಾತ ಹಾಸ್ಯ ಕಲಾವಿದರಾದ ರಿಚರ್ಡ್ ಲೂಯಿಸ್, ಬಿ. ಪ್ರಾಣೇಶ್ ಹಾಗೂ ಎಂ.ಎಸ್. ನರಸಿಂಹಮೂರ್ತಿ ಅವರು ಹಾಸ್ಯ ಚಟಾಕಿಗಳ ಮೂಲಕ ನಗೆ ಪಟಾಕಿಯನ್ನೇ ಸಿಡಿಸಿದರು.
ಒಬ್ಬೊಬ್ಬರು ಒಂದೊಂದು ನಗೆ ಪ್ರಸಂಗವನ್ನು ಪ್ರಸ್ತಾಪಿಸತ್ತಿದ್ದಂತೆಯೇ ಜನ ನಕ್ಕಿದ್ದೇ ನಕ್ಕಿದ್ದು. ಜನರ ಪ್ರತಿಕ್ರಿಯೆಯಿಂದ ಉತ್ತೇಜನಗೊಂಡ ಈ ಕಲಾವಿದರ ಹಾಸ್ಯ ಪ್ರವಾಹದಲ್ಲಿ ಸಮಯ ಸರಿದದ್ದೇ ಗೊತ್ತಾಗಲಿಲ್ಲ. ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ನಗೆಯ ಅಲೆಗಳ ಜಾತ್ರೆಯಲ್ಲಿ ಅಸಂಖ್ಯ ಪ್ರೇಕ್ಷಕರು ನಗೆಗಡಲಲ್ಲಿ ಮಿಂದರು.
'ಕೃಷ್ಣದೇವರಾಯ ಬಿದಿಗೆ ಚಂದ್ರಮ'
ಶ್ರೀ ಕೃಷ್ಣದೇವರಾಯನ ಆಸ್ಥಾನದ ವಿದೂಷಕ ತೆನಾಲಿ ರಾಮಕೃಷ್ಣ ಮೊಘಲರ ದರ್ಬಾರಿನಲ್ಲಿ ವಿಜಯನಗರದ ಅರಸ ಕೃಷ್ಣದೇವರಾಯರನ್ನು ಬಿದಿಗೆಯ ಚಂದ್ರಮನೆಂದು ಬಣ್ಣಿಸಿದರಂತೆ. ಅದಕ್ಕೆ ರಾಜನ ಆಸ್ಥಾನಿಕರು ಆತನನ್ನು ಹೀಗಳೆದರಂತೆ. ತಕ್ಷಣವೇ ತೆನಾಲಿ ರಾಮಕೃಷ್ಣ , 'ಹುಣ್ಣಿಮೆ ಚಂದ್ರ ದಿನಗಳೆದಂತೆ ಕ್ಷೀಣವಾಗಿ ಅಮಾವಾಸ್ಯೆಯಂದು ಇಲ್ಲವಾಗುತ್ತಾನೆ. ಆದರೆ ಬಿದಿಗೆಯ ಚಂದ್ರ ದಿನೇ ದಿನೇ ಪ್ರವರ್ಧಮಾನನಾಗಿ, ಹುಣ್ಣಿಮೆಯಂದು ಹಾಲ ಬೆಳದಿಂಗಳು ಚೆಲ್ಲುತ್ತಾನೆಂದು ಪ್ರತ್ಯುತ್ತರ ನೀಡಿದನು. ಆತನ ಜಾಣ್ಮೆಗೆ ಎಲ್ಲರೂ ತಲೆದೂಗಿದರಂತೆ' ಎಂದು ಎಂ.ಎಸ್. ನರಸಿಂಹಮೂರ್ತಿ ಅವರು ಹೇಳಿದಾಗ ನೆರೆದ ಜನ ಸಮೂಹವೂ ತಲೆದೂಗಿತು.
ರಿಚರ್ಡ್ ಲೂಯಿಸ್ ಅವರು ಹೊಸಪೇಟೆಯ 'ಮೈನ್ಸ್, ವೈನ್ಸ್ ಮತ್ತು ಫೈ(ನಾ)ನ್ಸ್' ಬಗ್ಗೆ ವಿಡಂಬನಾತ್ಮಕವಾಗಿ ಮಾತನಾಡಿದರಲ್ಲದೆ, ಇಲ್ಲಿನ ಸೊಳ್ಳೆಗಳ ಜಾಣ್ಮೆಯನ್ನು ಕೊಂಡಾಡಿದರು. ಹಾಸ್ಯವನ್ನೇ ಪ್ರಾಣವಾಗಿಸಿಕೊಂಡ ಗಂಗಾವತಿಯ ಬಿ. ಪ್ರಾಣೇಶ್, ಮಕ್ಕಳಿಗೆ ಒತ್ತಡ ಹೇರಿ ಓದಿಸುವುದರ ವಿರುದ್ಧ ನಗೆಚಾಟಿ ಬೀಸಿದರು. ಒಂದು ಎರಡು ರ್ಯಾಂಕ್ ಬರುವ ಡಿಗ್ರಿಯನ್ನು ಲೇವಡಿ ಮಾಡುತ್ತ, ಅಂತಹವರಿಗೆ 108 ಡಿಗ್ರಿ ಹೊಂದಿರುವ ಥರ್ಮಾಮೀಟರ್ ನೀಡಿ ಸನ್ಮಾನಿಸಬಾರದೇಕೆ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಪ್ರೇಕ್ಷಕ ಸಮೂಹವನ್ನು ಕೊನೆಯವರೆಗೂ ಹಿಡಿದಿಡುವಲ್ಲಿ ಯಶಸ್ವಿಯಾದ ಈ ಹಾಸ್ಯಗೋಷ್ಠಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಉದ್ಘಾಟಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ, ಆರೋಗ್ಯಕರ ಸಮಾಜಕ್ಕೆ ಆರೋಗ್ಯಕರ ಹಾಸ್ಯ ಒಳಿತನ್ನೇ ಮಾಡುತ್ತದೆ. ಎಲ್ಲ ವಯೋಮಾನಕ್ಕೆ ಒಪ್ಪುವ ಹಾಸ್ಯ ಒಳ್ಳೆಯ ಅಭಿರುಚಿ ಮೂಡಿಸುವುದು. ಹಾಸ್ಯವು ನಗೆಗಷ್ಟೇ ಸೀಮಿತವಾಗದೆ, ಸಮಾಜದಲ್ಲಿ ಜಾಗೃತಿಗೆ ಮುಂದಾಗಬೇಕೆಂದು ಅಭಿಪ್ರಾಯಪಟ್ಟರು. ಅನಿಲ್ ದೇಸಾಯಿ ಅವರು ಕಾರ್ಯಕ್ರಮ ನಿರೂಪಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications