ಗೋದಾವರಿಯಲ್ಲಿ ದೋಣಿ ಮಗುಚಿ 10 ಸಾವು
ಹೈದರಾಬಾದ್,
ಜ.30: ಗೋದಾವರಿ ನದಿಯಲ್ಲಿ ದೋಣಿ ಮಗುಚಿಬಿದ್ದ ಕಾರಣ ಹತ್ತು ಮಂದಿ ಸಾವನ್ನಪ್ಪಿದ್ದು 40 ಮಂದಿ ನಾಪತ್ತೆಯಾಗಿರುವ ಘಟನೆ ಶನಿವಾರ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರನ್ನು ದೋಣಿಯಲ್ಲಿ ಸಾಗಿಸುತ್ತಿದ್ದದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. id="toptextpromo">ದೇಸಿ
ನಿರ್ಮಿತ ದೋಣಿಯಲ್ಲಿ 40ರಿಂದ 50 ಮಂದಿ ಪ್ರಯಾಣಿಸುತ್ತಿದ್ದರು. ಶನಿವಾರ ಮುಂಜಾನೆ 6.30ರ ಸಮಯದಲ್ಲಿ ಬಿಯಪುಟೇರು ಎಂಬ ಗ್ರಾಮದ ಬಳಿ ದೋಣಿ ಮಗುಚಿಬಿದ್ದ ಕಾರಣ ಈ ದುರಂತ ಸಂಭವಿಸಿತು ಎಂದು ಪಶ್ಚಿಮ ಗೋದಾವರಿ ಜಿಲ್ಲಾಧಿಕಾರಿ ಬಿ ಬಾಲಕೃಷ್ಣ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಇದುವರೆಗೂ
ಹತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇವರೆಲ್ಲಾ ಅಂತರ್ವೇದಿ ಸಮೀಪ ನಡೆಯುತ್ತಿರುವ ಉತ್ಸವವೊಂದರಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ನಾಪತ್ತೆಯಾದವರ ಪತ್ತೆ ಕಾರ್ಯ ಭರದಿಂದ ಸಾಗಿದೆ.











Click it and Unblock the Notifications