ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋದಾವರಿಯಲ್ಲಿ ದೋಣಿ ಮಗುಚಿ 10 ಸಾವು

By Rajendra
|
Google Oneindia Kannada News

Boat overturns in Godavari 10 people dead
ಹೈದರಾಬಾದ್, ಜ.30: ಗೋದಾವರಿ ನದಿಯಲ್ಲಿ ದೋಣಿ ಮಗುಚಿಬಿದ್ದ ಕಾರಣ ಹತ್ತು ಮಂದಿ ಸಾವನ್ನಪ್ಪಿದ್ದು 40 ಮಂದಿ ನಾಪತ್ತೆಯಾಗಿರುವ ಘಟನೆ ಶನಿವಾರ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರನ್ನು ದೋಣಿಯಲ್ಲಿ ಸಾಗಿಸುತ್ತಿದ್ದದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ದೇಸಿ ನಿರ್ಮಿತ ದೋಣಿಯಲ್ಲಿ 40ರಿಂದ 50 ಮಂದಿ ಪ್ರಯಾಣಿಸುತ್ತಿದ್ದರು. ಶನಿವಾರ ಮುಂಜಾನೆ 6.30ರ ಸಮಯದಲ್ಲಿ ಬಿಯಪುಟೇರು ಎಂಬ ಗ್ರಾಮದ ಬಳಿ ದೋಣಿ ಮಗುಚಿಬಿದ್ದ ಕಾರಣ ಈ ದುರಂತ ಸಂಭವಿಸಿತು ಎಂದು ಪಶ್ಚಿಮ ಗೋದಾವರಿ ಜಿಲ್ಲಾಧಿಕಾರಿ ಬಿ ಬಾಲಕೃಷ್ಣ ತಿಳಿಸಿದ್ದಾರೆ.

ಇದುವರೆಗೂ ಹತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇವರೆಲ್ಲಾ ಅಂತರ್ವೇದಿ ಸಮೀಪ ನಡೆಯುತ್ತಿರುವ ಉತ್ಸವವೊಂದರಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ನಾಪತ್ತೆಯಾದವರ ಪತ್ತೆ ಕಾರ್ಯ ಭರದಿಂದ ಸಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X