ದೇವೇಗೌಡ, ಯಡಿಯೂರಪ್ಪ ಮಾತುಕತೆ 'ನೈಸ್'

ದೇವೇಗೌಡರು ನೈಸ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದ್ದು, ಸತ್ಯಾಗ್ರಹ ಮಾಡಿದ್ದು ಆಯ್ತು. ರಾಜ್ಯಪಾಲರನ್ನು ಭೇಟಿ ಮಾಡಿದ್ದು ಆಯ್ತು. ಇದೀಗ ನೇರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನೈಸ್ ಕುರಿತ ಹಳೆಯ ಕಡತಗಳನ್ನೇ ದೇವೇಗೌಡರು ಸಮಾಲೋಚನೆಯಲ್ಲಿ ಮುಂದಿಟ್ಟರು.
ಮುಖ್ಯಮಂತ್ರಿಗಳ ಜೊತೆ ಒಂದೂವರೆ ಗಂಟೆಗಳ ಚರ್ಚೆಯ ಬಳಿಕ ದೇವೇಗೌಡರು ಹೇಳಿದ್ದು,ಮುಖ್ಯಮಂತ್ರಿಗಳು ನಮ್ಮ ಎಲ್ಲ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿದರು. ನೈಸ್ ಕುರಿತ ಎಲ್ಲ ದಾಖಲೆಗಳನ್ನು ಅವರಿಗೆ ನೀಡಲಾಯಿತು. ಸುಪ್ರೀಂಕೋರ್ಟ್ ನ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು ಎಂದು ತಿಳಿಸಿದರು.
ಸಿಪಿಐ(ಎಂ) ಮುಖಂಡ ಜಿ ಎನ್ ನಾಗರಾಜ್ ಮಾತನಾಡುತ್ತಾ, ನೈಸ್ ನ ಮೂಲ ಒಪ್ಪಂದ ಉಲ್ಲಂಘನೆಯಾಗಿದೆ. ಜೆ ಎಚ್ ಪಟೇಲ್ ಮತ್ತು ಎಸ್ ಎಂ ಕೃಷ್ಣ ಅವರ ಸರಕಾರದ ಅವಧಿಯಲ್ಲಿ ಮೂಲ ಒಪ್ಪಂದವನ್ನು ಮತ್ತಷ್ಟು ಉಲ್ಲಂಘನೆ ಮಾಡಲಾಯಿತು. ಯಡಿಯೂರಪ್ಪ ಸರಕಾರ ಮೂಲ ಒಪ್ಪಂದ ಉಲ್ಲಂಘನೆಯನ್ನು ಕೈಬಿಡಬೇಕು ಎಂದು ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದರು.
ಕಳೆದ 25 ದಿನಗಳಿಂದ ನೈಸ್ ವಿರುದ್ಧ ದೇವೇಗೌಡರು ರೈತರೊಂದಿಗೆ ಸೇರಿ ನಡೆಸಿದ ಹೋರಾಟ, ಪ್ರತಿಭಟನೆ ಇಂದು ನಿರ್ಣಾಯಕ ಹಂತ ತಲುಪಿ ನೈಸಾಗಿ ಮುಗಿಯಿತು. ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ಮಾಡುವುದಾಗಿ ಗೌಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೇವೇಗೌಡರನ್ನು ಯಡಿಯೂರಪ್ಪ ಚರ್ಚೆಗೆ ಆಹ್ವಾನಿಸಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡುವುದಕ್ಕೂ ಮುನ್ನ ದೇವೇಗೌಡರು ಮಧ್ಯಾಹ್ನ 1 ಗಂಟೆಗೆ ರಾಜ್ಯಪಾಲ ಭಾರದ್ವಾಜ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು. ರಾಜ್ಯಪಾಲರಿಗೆ ಸಲ್ಲಿಸಿದ ನೈಸ್ ಕಡತಗಳನ್ನು ಮುಖ್ಯಮಂತ್ರಿಗಳಿಗೂ ಸಲ್ಲಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಚರ್ಚೆ ನಡೆಯುತ್ತಿದ್ದರೆ ಹೊರಗೆ ರೈತರು ಪ್ರತಿಭಟನೆಗೆ ಇಳಿದಿದ್ದರು. ನಮ್ಮನ್ನು ಮಾತುಕತೆ ಬಿಡಿ ಎಂದು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ನಿಜವಾದ ಭೂಮಿ ಕಳೆದುಕೊಂಡ ರೈತರು ನಾವು ಎಂದು ಅವರು ಅಸಹನೆ ವ್ಯಕ್ತಪಡಿಸುತ್ತಿದ್ದರು.
ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್ ಅಶೋಕ್, ಸುರೇಶ್ ಕುಮಾರ್, ಉಮೇಶ್ ಕತ್ತಿ, ಡಿಬಿ ಚಂದ್ರೇಗೌಡ ಮುಂತಾದವರು ಸಮಾಲೋಚನೆಯಲ್ಲಿ ಉಪಸ್ಥಿತರಿದ್ದರು. ದೇವೇಗೌಡರ ಜೊತೆ ಸಿಪಿಎಂ ಮುಖಂಡರಾದ ಜಿ ಎನ್ ನಾಗರಾಜ್, ಶ್ರೀರಾಮರೆಡ್ಡಿ ಸೇರಿದಂತೆ ಹಲವು ರೈತ ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications