ದೇವೇಗೌಡ, ಯಡಿಯೂರಪ್ಪ ಮಾತುಕತೆ 'ನೈಸ್'

ದೇವೇಗೌಡರು ನೈಸ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದ್ದು, ಸತ್ಯಾಗ್ರಹ ಮಾಡಿದ್ದು ಆಯ್ತು. ರಾಜ್ಯಪಾಲರನ್ನು ಭೇಟಿ ಮಾಡಿದ್ದು ಆಯ್ತು. ಇದೀಗ ನೇರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನೈಸ್ ಕುರಿತ ಹಳೆಯ ಕಡತಗಳನ್ನೇ ದೇವೇಗೌಡರು ಸಮಾಲೋಚನೆಯಲ್ಲಿ ಮುಂದಿಟ್ಟರು.
ಮುಖ್ಯಮಂತ್ರಿಗಳ ಜೊತೆ ಒಂದೂವರೆ ಗಂಟೆಗಳ ಚರ್ಚೆಯ ಬಳಿಕ ದೇವೇಗೌಡರು ಹೇಳಿದ್ದು,ಮುಖ್ಯಮಂತ್ರಿಗಳು ನಮ್ಮ ಎಲ್ಲ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿದರು. ನೈಸ್ ಕುರಿತ ಎಲ್ಲ ದಾಖಲೆಗಳನ್ನು ಅವರಿಗೆ ನೀಡಲಾಯಿತು. ಸುಪ್ರೀಂಕೋರ್ಟ್ ನ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು ಎಂದು ತಿಳಿಸಿದರು.
ಸಿಪಿಐ(ಎಂ) ಮುಖಂಡ ಜಿ ಎನ್ ನಾಗರಾಜ್ ಮಾತನಾಡುತ್ತಾ, ನೈಸ್ ನ ಮೂಲ ಒಪ್ಪಂದ ಉಲ್ಲಂಘನೆಯಾಗಿದೆ. ಜೆ ಎಚ್ ಪಟೇಲ್ ಮತ್ತು ಎಸ್ ಎಂ ಕೃಷ್ಣ ಅವರ ಸರಕಾರದ ಅವಧಿಯಲ್ಲಿ ಮೂಲ ಒಪ್ಪಂದವನ್ನು ಮತ್ತಷ್ಟು ಉಲ್ಲಂಘನೆ ಮಾಡಲಾಯಿತು. ಯಡಿಯೂರಪ್ಪ ಸರಕಾರ ಮೂಲ ಒಪ್ಪಂದ ಉಲ್ಲಂಘನೆಯನ್ನು ಕೈಬಿಡಬೇಕು ಎಂದು ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದರು.
ಕಳೆದ 25 ದಿನಗಳಿಂದ ನೈಸ್ ವಿರುದ್ಧ ದೇವೇಗೌಡರು ರೈತರೊಂದಿಗೆ ಸೇರಿ ನಡೆಸಿದ ಹೋರಾಟ, ಪ್ರತಿಭಟನೆ ಇಂದು ನಿರ್ಣಾಯಕ ಹಂತ ತಲುಪಿ ನೈಸಾಗಿ ಮುಗಿಯಿತು. ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ಮಾಡುವುದಾಗಿ ಗೌಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೇವೇಗೌಡರನ್ನು ಯಡಿಯೂರಪ್ಪ ಚರ್ಚೆಗೆ ಆಹ್ವಾನಿಸಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡುವುದಕ್ಕೂ ಮುನ್ನ ದೇವೇಗೌಡರು ಮಧ್ಯಾಹ್ನ 1 ಗಂಟೆಗೆ ರಾಜ್ಯಪಾಲ ಭಾರದ್ವಾಜ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು. ರಾಜ್ಯಪಾಲರಿಗೆ ಸಲ್ಲಿಸಿದ ನೈಸ್ ಕಡತಗಳನ್ನು ಮುಖ್ಯಮಂತ್ರಿಗಳಿಗೂ ಸಲ್ಲಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಚರ್ಚೆ ನಡೆಯುತ್ತಿದ್ದರೆ ಹೊರಗೆ ರೈತರು ಪ್ರತಿಭಟನೆಗೆ ಇಳಿದಿದ್ದರು. ನಮ್ಮನ್ನು ಮಾತುಕತೆ ಬಿಡಿ ಎಂದು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ನಿಜವಾದ ಭೂಮಿ ಕಳೆದುಕೊಂಡ ರೈತರು ನಾವು ಎಂದು ಅವರು ಅಸಹನೆ ವ್ಯಕ್ತಪಡಿಸುತ್ತಿದ್ದರು.
ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್ ಅಶೋಕ್, ಸುರೇಶ್ ಕುಮಾರ್, ಉಮೇಶ್ ಕತ್ತಿ, ಡಿಬಿ ಚಂದ್ರೇಗೌಡ ಮುಂತಾದವರು ಸಮಾಲೋಚನೆಯಲ್ಲಿ ಉಪಸ್ಥಿತರಿದ್ದರು. ದೇವೇಗೌಡರ ಜೊತೆ ಸಿಪಿಎಂ ಮುಖಂಡರಾದ ಜಿ ಎನ್ ನಾಗರಾಜ್, ಶ್ರೀರಾಮರೆಡ್ಡಿ ಸೇರಿದಂತೆ ಹಲವು ರೈತ ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications