ಅವ್ಯವಸ್ಥೆಯ ಆಗರವಾಗಿರುವ ವಿಷ್ಣು ಸಮಾಧಿ ಸ್ಥಳ
ಬೆಂಗಳೂರು, ಜ. 31 : ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಕಳೆದುಕೊಂಡು ತಿಂಗಳಾಗುವಹೊತ್ತಿಗೆ ಉತ್ತರಹಳ್ಳಿ ರಸ್ತೆಯ ಅಭಿಮಾನ್ ಸ್ಟುಡಿಯೋದಲ್ಲಿರುವ ಅವರ ಅಂತ್ಯಸಂಸ್ಕಾರ ನಡೆಸಿದ ಸ್ಥಳ ಅವ್ಯವಸ್ಥೆಯ ಆಗರವಾಗಿ ಪರಿವರ್ತಿತವಾಗಿದ್ದು, ಅಭಿಮಾನಿಗಳು ಮತ್ತೆ ರೊಚ್ಚಿಗೇಳುವಂತೆ ಮಾಡಿದೆ.
ಅಭಿನವ ಭಾರ್ಗವ ತೀರಿಕೊಂಡ ದಿನವೇ ವಿಷ್ಣು ಅಂತ್ಯಸಂಸ್ಕಾರಕ್ಕಾಗಿ ಎರಡು ಎಕರೆ ಜಮೀನು ನೀಡಿ ಅಭಿಮಾನ್ ಸ್ಟುಡಿಯೋ ಅಭಿಮಾನ ಮೆರೆದಿತ್ತು. ಸರಕಾರ ಕೂಡ ವಿಷ್ಣು ಅಂತ್ಯಸಂಸ್ಕಾರಕ್ಕೆ ಸರ್ವರೀತಿಯ ಭದ್ರತೆ ನೀಡಿ, ಸ್ಮಾರಕ ನಿರ್ಮಾಣಕ್ಕೆ 10 ಕೋಟಿ ರು. ನೀಡುವುದಾಗಿ ವಾಗ್ದಾನ ನೀಡಿ ಸಹಸ್ರಾರು ಅಭಿಮಾನಿಗಳ ಹರ್ಷಕ್ಕೆ ಕಾರಣವಾಗಿತ್ತು.
ಜನೆವರಿ 30ಕ್ಕೆ ಸ್ಫುರದ್ರುಪಿ ನಟ ಇಹಲೋಕ ತ್ಯಜಿಸಿ ಒಂದು ತಿಂಗಳು. ಕಳೆದ ವರ್ಷದ ಡಿಸೆಂಬರ್ 30ರಿಂದ ಇಂದಿನವರೆಗೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋಗೆ ಭೇಟಿ ನಮನ ಸಲ್ಲಿಸುತ್ತಿದ್ದಾರೆ. ಪ್ರತಿದಿನ ಅನ್ನಸಂತರ್ಪಣೆ ಕೂಡ ನಡೆಯುತ್ತಿದೆ.
ವಿಷ್ಣು ಅವರ ಸ್ಮಾರಕಕ್ಕೆ ಪೂರ್ವಭಾವಿ ಸಿದ್ಧತೆಗಳಿರಲಿ ಸಮಾಧಿಗೆ ಸೂಕ್ತ ರಕ್ಷಣೆಯನ್ನೂ ನೀಡಿಲ್ಲ. ಸಮಾಧಿಯ ಮೇಲೆ ಹಾಕಿರುವ ಶಾಮಿಯಾನಾ ಕೂಡ ಆಗಲೋ ಈಗಲೋ ಅನ್ನುವಂತಾಗಿದೆ. ಜೋರಾಗಿ ಗಾಳಿ ಬೀಸಿದರೆ ಕಿತ್ತುಹೋಗುವಂಥ ಸ್ಥಿತಿ ತಲುಪಿದೆ. ಜನರಿಗೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಅಲ್ಲಿ ಕಲ್ಪಿಸಿಲ್ಲ. ದೂರದಿಂದ ಬರುವ ಹೆಣ್ಣುಮಕ್ಕಳ ಶೌಚಕ್ಕಾಗಿ ಶೌಚಾಯಲಯದ ವ್ಯವಸ್ಥೆ ಮಾಡಿಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳ ನೋಡಲು ಬರುವ ಜನರಿಗಾಗಿ ಇಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇನ್ನು ಸ್ಮಾರಕ ನಿರ್ಮಿಸುವುದು ಕನಸಿನ ಮಾತೇ ಸರಿ ಎಂದು ಅಭಿಮಾನಿಯೊಬ್ಬರು ಬೇಸರ ವ್ಯಕ್ತಪಡಿಸುತ್ತಾರೆ. ಸರಕಾರದ ದಿವ್ಯ ನಿರ್ಲಕ್ಷ್ಯ ಹೀಗೇ ಮುಂದುವರಿದರೆ ಅಭಿಮಾನಿಗಳು ಹೋರಾಟದ ಹಾದಿ ಹಿಡಿಯದೇ ಅನ್ಯ ಮಾರ್ಗವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ.
ಇನ್ನಾದರೂ ಸರಕಾರ ಕರ್ನಾಟಕದ ಹೆಮ್ಮೆಯ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಗಮನ ಹರಿಸುವುದೆ?
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications