ಅವ್ಯವಸ್ಥೆಯ ಆಗರವಾಗಿರುವ ವಿಷ್ಣು ಸಮಾಧಿ ಸ್ಥಳ
ಬೆಂಗಳೂರು, ಜ. 31 : ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಕಳೆದುಕೊಂಡು ತಿಂಗಳಾಗುವಹೊತ್ತಿಗೆ ಉತ್ತರಹಳ್ಳಿ ರಸ್ತೆಯ ಅಭಿಮಾನ್ ಸ್ಟುಡಿಯೋದಲ್ಲಿರುವ ಅವರ ಅಂತ್ಯಸಂಸ್ಕಾರ ನಡೆಸಿದ ಸ್ಥಳ ಅವ್ಯವಸ್ಥೆಯ ಆಗರವಾಗಿ ಪರಿವರ್ತಿತವಾಗಿದ್ದು, ಅಭಿಮಾನಿಗಳು ಮತ್ತೆ ರೊಚ್ಚಿಗೇಳುವಂತೆ ಮಾಡಿದೆ.
ಅಭಿನವ ಭಾರ್ಗವ ತೀರಿಕೊಂಡ ದಿನವೇ ವಿಷ್ಣು ಅಂತ್ಯಸಂಸ್ಕಾರಕ್ಕಾಗಿ ಎರಡು ಎಕರೆ ಜಮೀನು ನೀಡಿ ಅಭಿಮಾನ್ ಸ್ಟುಡಿಯೋ ಅಭಿಮಾನ ಮೆರೆದಿತ್ತು. ಸರಕಾರ ಕೂಡ ವಿಷ್ಣು ಅಂತ್ಯಸಂಸ್ಕಾರಕ್ಕೆ ಸರ್ವರೀತಿಯ ಭದ್ರತೆ ನೀಡಿ, ಸ್ಮಾರಕ ನಿರ್ಮಾಣಕ್ಕೆ 10 ಕೋಟಿ ರು. ನೀಡುವುದಾಗಿ ವಾಗ್ದಾನ ನೀಡಿ ಸಹಸ್ರಾರು ಅಭಿಮಾನಿಗಳ ಹರ್ಷಕ್ಕೆ ಕಾರಣವಾಗಿತ್ತು.
ಜನೆವರಿ 30ಕ್ಕೆ ಸ್ಫುರದ್ರುಪಿ ನಟ ಇಹಲೋಕ ತ್ಯಜಿಸಿ ಒಂದು ತಿಂಗಳು. ಕಳೆದ ವರ್ಷದ ಡಿಸೆಂಬರ್ 30ರಿಂದ ಇಂದಿನವರೆಗೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋಗೆ ಭೇಟಿ ನಮನ ಸಲ್ಲಿಸುತ್ತಿದ್ದಾರೆ. ಪ್ರತಿದಿನ ಅನ್ನಸಂತರ್ಪಣೆ ಕೂಡ ನಡೆಯುತ್ತಿದೆ.
ವಿಷ್ಣು ಅವರ ಸ್ಮಾರಕಕ್ಕೆ ಪೂರ್ವಭಾವಿ ಸಿದ್ಧತೆಗಳಿರಲಿ ಸಮಾಧಿಗೆ ಸೂಕ್ತ ರಕ್ಷಣೆಯನ್ನೂ ನೀಡಿಲ್ಲ. ಸಮಾಧಿಯ ಮೇಲೆ ಹಾಕಿರುವ ಶಾಮಿಯಾನಾ ಕೂಡ ಆಗಲೋ ಈಗಲೋ ಅನ್ನುವಂತಾಗಿದೆ. ಜೋರಾಗಿ ಗಾಳಿ ಬೀಸಿದರೆ ಕಿತ್ತುಹೋಗುವಂಥ ಸ್ಥಿತಿ ತಲುಪಿದೆ. ಜನರಿಗೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಅಲ್ಲಿ ಕಲ್ಪಿಸಿಲ್ಲ. ದೂರದಿಂದ ಬರುವ ಹೆಣ್ಣುಮಕ್ಕಳ ಶೌಚಕ್ಕಾಗಿ ಶೌಚಾಯಲಯದ ವ್ಯವಸ್ಥೆ ಮಾಡಿಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳ ನೋಡಲು ಬರುವ ಜನರಿಗಾಗಿ ಇಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇನ್ನು ಸ್ಮಾರಕ ನಿರ್ಮಿಸುವುದು ಕನಸಿನ ಮಾತೇ ಸರಿ ಎಂದು ಅಭಿಮಾನಿಯೊಬ್ಬರು ಬೇಸರ ವ್ಯಕ್ತಪಡಿಸುತ್ತಾರೆ. ಸರಕಾರದ ದಿವ್ಯ ನಿರ್ಲಕ್ಷ್ಯ ಹೀಗೇ ಮುಂದುವರಿದರೆ ಅಭಿಮಾನಿಗಳು ಹೋರಾಟದ ಹಾದಿ ಹಿಡಿಯದೇ ಅನ್ಯ ಮಾರ್ಗವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ.
ಇನ್ನಾದರೂ ಸರಕಾರ ಕರ್ನಾಟಕದ ಹೆಮ್ಮೆಯ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಗಮನ ಹರಿಸುವುದೆ?
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications