ಮಂಗಳೂರು ಚರ್ಚ್ ಮೇಲೆ ಕಲ್ಲು ತೂರಾಟ

ಸಿಓಡಿಪಿಯ ಕಾರ್ಯದರ್ಶಿ ಫಾ.ಒನಿಲ್ ಡಿ"ಸೋಜಾ ಅವರು ದೂರು ನೀಡಿದ್ದು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸೆ.15ರಂದು ಕಿಡಿಗೇಡಿಗಳು ಈ ಕಟ್ಟಡದ ಮೇಲೆ ಕಲ್ಲು ತೂರಿದ್ದರು. ಇದೀಗ ಎರಡನೇ ಬಾರಿಗೆ ಕಟ್ಟಡದ ಮೇಲೆ ಕಲ್ಲೆಸೆಯಲಾಗಿದೆ ಎಂದು ಫಾ.ಒನಿಲ್ ಡಿ"ಸೋಜಾ ತಿಳಿಸಿದ್ದಾರೆ.
ಈ ದುಷ್ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಫಾ.ಒನಿಲ್ ಅವರು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕದ್ರಿ ಪೊಲೀಸರು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications