Get Updates
Get notified of breaking news, exclusive insights, and must-see stories!

ಮಂಗಳೂರು ಚರ್ಚ್ ಮೇಲೆ ಕಲ್ಲು ತೂರಾಟ

Stones thrown at codp in mangalore
ಮಂಗಳೂರು, ಫೆ.1: ಮಂಗಳೂರಿನ ಸಂತೂರು ಪಾದುಕಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 17ರ ಬಳಿ ಇರುವ ಮಂಗಳೂರು ಬಿಷಪ್ ಧರ್ಮಪ್ರಾಂತಕ್ಕೆ ಒಳಪಟ್ಟ (ಕೆನರಾ ಆರ್ಗನೈಜೇಶನ್ ಫಾರ್ ಡೆವಲಪ್ ಮೆಂಟ್ ಅಂಡ್ ಪೀಸ್-ಸಿಓಡಿಪಿ) ಕ್ರೈಸ್ತ ಸಾಮಾಜಿಕ ಚಟುವಟಿಕೆ ಕೇಂದ್ರದ ಮೇಲೆ ಭಾನುವಾರ ಬೆಳಗ್ಗೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಮೇರಿ ಮಾತೆಯ ಭಾವ ಚಿತ್ರಕ್ಕೆ ಅಳವಡಿಸಿದ್ದ ಗಾಜು ಪುಡಿಯಾಗಿದೆ.

ಸಿಓಡಿಪಿಯ ಕಾರ್ಯದರ್ಶಿ ಫಾ.ಒನಿಲ್ ಡಿ"ಸೋಜಾ ಅವರು ದೂರು ನೀಡಿದ್ದು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸೆ.15ರಂದು ಕಿಡಿಗೇಡಿಗಳು ಈ ಕಟ್ಟಡದ ಮೇಲೆ ಕಲ್ಲು ತೂರಿದ್ದರು. ಇದೀಗ ಎರಡನೇ ಬಾರಿಗೆ ಕಟ್ಟಡದ ಮೇಲೆ ಕಲ್ಲೆಸೆಯಲಾಗಿದೆ ಎಂದು ಫಾ.ಒನಿಲ್ ಡಿ"ಸೋಜಾ ತಿಳಿಸಿದ್ದಾರೆ.

ಈ ದುಷ್ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಫಾ.ಒನಿಲ್ ಅವರು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕದ್ರಿ ಪೊಲೀಸರು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+