ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಂಗಳೂರು ಚರ್ಚ್ ಮೇಲೆ ಕಲ್ಲು ತೂರಾಟ
ಸಿಓಡಿಪಿಯ ಕಾರ್ಯದರ್ಶಿ ಫಾ.ಒನಿಲ್ ಡಿ"ಸೋಜಾ ಅವರು ದೂರು ನೀಡಿದ್ದು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸೆ.15ರಂದು ಕಿಡಿಗೇಡಿಗಳು ಈ ಕಟ್ಟಡದ ಮೇಲೆ ಕಲ್ಲು ತೂರಿದ್ದರು. ಇದೀಗ ಎರಡನೇ ಬಾರಿಗೆ ಕಟ್ಟಡದ ಮೇಲೆ ಕಲ್ಲೆಸೆಯಲಾಗಿದೆ ಎಂದು ಫಾ.ಒನಿಲ್ ಡಿ"ಸೋಜಾ ತಿಳಿಸಿದ್ದಾರೆ.
ಈ ದುಷ್ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಫಾ.ಒನಿಲ್ ಅವರು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕದ್ರಿ ಪೊಲೀಸರು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
Story first published: Monday, February 1, 2010, 9:49 [IST]