ಬೆಳಗಾವಿ ಮಹಾರಾಷ್ಟ್ರದಲ್ಲಿ, ಉಪರಾಷ್ಟ್ರಪತಿ ಕಚೇರಿ

ಜನವರಿ 11 ರಂದು ಉಪರಾಷ್ಟ್ರಪತಿಗಳ ಸಚಿವಾಲಯದ ಅಧೀನ ಕಾರ್ಯದರ್ಶಿ ಮಹಿತಾಬ್ ಸಿಂಗ್ ಬೆಳಗಾವಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ಅವರಿಗೆ ಪ್ರತ್ಯೇಕ ಪತ್ರ ಬರೆದು ಅದರಲ್ಲಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ, ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರ ಎಂದು ವಿಳಾಸವನ್ನು ನಿರ್ದೇಶಿಸಿದ್ದಾರೆ.
ಉಪರಾಷ್ಟ್ರಪತಿ ಸಚಿವಾಲಯದ ಈ ನಡುವಳಿಕೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ತೀವ್ರ ಪ್ರತಿಭಟನೆ ನಡೆಸಲು ಮುಂದಾಗಿವೆ. ಉಪರಾಷ್ಟ್ರಪತಿ ಕಾರ್ಯಾಲಯದಲ್ಲಿ ಈ ತಪ್ಪಿಗೆ ಕಾರಣರಾದ ಅಧಿಕಾರಿಯನ್ನು ತಕ್ಷಣ ಪತ್ತೆ ಹಚ್ಚಿ ಕ್ರಮ ಜರುಗಿಸಬೇಕುಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಹೇಳಿಕೆ ನೀಡಿದ್ದಾರೆ.












Click it and Unblock the Notifications