ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೆಳಗಾವಿ ಮಹಾರಾಷ್ಟ್ರದಲ್ಲಿ, ಉಪರಾಷ್ಟ್ರಪತಿ ಕಚೇರಿ
ಜನವರಿ 11 ರಂದು ಉಪರಾಷ್ಟ್ರಪತಿಗಳ ಸಚಿವಾಲಯದ ಅಧೀನ ಕಾರ್ಯದರ್ಶಿ ಮಹಿತಾಬ್ ಸಿಂಗ್ ಬೆಳಗಾವಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ಅವರಿಗೆ ಪ್ರತ್ಯೇಕ ಪತ್ರ ಬರೆದು ಅದರಲ್ಲಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ, ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರ ಎಂದು ವಿಳಾಸವನ್ನು ನಿರ್ದೇಶಿಸಿದ್ದಾರೆ.
ಉಪರಾಷ್ಟ್ರಪತಿ ಸಚಿವಾಲಯದ ಈ ನಡುವಳಿಕೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ತೀವ್ರ ಪ್ರತಿಭಟನೆ ನಡೆಸಲು ಮುಂದಾಗಿವೆ. ಉಪರಾಷ್ಟ್ರಪತಿ ಕಾರ್ಯಾಲಯದಲ್ಲಿ ಈ ತಪ್ಪಿಗೆ ಕಾರಣರಾದ ಅಧಿಕಾರಿಯನ್ನು ತಕ್ಷಣ ಪತ್ತೆ ಹಚ್ಚಿ ಕ್ರಮ ಜರುಗಿಸಬೇಕುಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಹೇಳಿಕೆ ನೀಡಿದ್ದಾರೆ.
Comments
ಬೆಳಗಾವಿ ಕರ್ನಾಟಕ karnataka maharashtra ಗಡಿ ವಿವಾದ ಮಹಾರಾಷ್ಟ್ರ ಕನ್ನಡ ಸಾಹಿತ್ಯ ಪರಿಷತ್ nallur prasad ನಲ್ಲೂರು ಪ್ರಸಾದ್ ಹಮೀದ್ ಅನ್ಸಾರಿ border ಉಪರಾಷ್ಟ್ರಪತಿ vice president
Story first published: Monday, February 1, 2010, 16:37 [IST]