ಫೆ. 4 ಬಸ್ ದಿನ,ಮಿಸ್ ಮಾಡ್ಬೇಡಿ

ನಾಳೆ ಎಲೆಕ್ಟ್ರಾನಿಕ್ ಸಿಟಿ ಹಾಗೂ ಐಟಿಪಿಎಲ್ ನ ಐಟಿ ಕಾರಿಡಾರ್ ಗಳ ಟೆಕ್ಕಿಗಳು ಬಸ್ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಬಿಎಂಟಿಸಿ ಅಧಿಕಾರಿಗಳು ಕೂಡ ಬಸ್ ನಲ್ಲಿ ಸಂಚರಿಸುತ್ತಿರುವುದು ವಿಶೇಷ.ಸಂಚಾರ ಒತ್ತಡ ಇರುವ ಸಮಯದಲ್ಲಿ ಹೆಚ್ಚಿನ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ಕೆಆರ್ ಮಾರುಕಟ್ಟೆ, ಮಡಿವಾಳ, ಕೋರಮಂಗಲ, ಬಸವೇಶ್ವರ ನಗರ, ಬನಶಂಕರಿ, ವಿಜಯನಗರ, ವಿದ್ಯಾರಣ್ಯಪುರ, ಕೆಆರ್ ಪುರಂ ಮುಂತಾದ ಸ್ಥಳಗಳಲ್ಲಿ ಹೆಚ್ಚೆಚ್ಚು ಬಸ್ ಗಳು ಸಂಚರಿಸಲಿವೆ.
ಫೀಡರ್ ಸೇವೆ: ಕೋನಪ್ಪನ ಅಗ್ರಹಾರ>ಎಲೆಕ್ಟಾನಿಕ್ ಸಿಟಿ ಮುಖ್ಯದ್ವಾರ, ಮಾರತ್ತಹಳ್ಳಿ>ಹೋಪ್ ಫಾರಂ ಮಾರ್ಗ ಕುಂದಲ ಹಳ್ಳಿ, ಗ್ರಾಫೈಟ್ ಇಂಡಿಯಾ>ಸತ್ಯಸಾಯಿ ಆಸ್ಪತ್ರೆ>ಐಟಿಪಿಎಲ್. ಪ್ರತಿ ಐದು ನಿಮಿಷಕ್ಕೆ ಈ ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಗಳು ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದರು.
ಇಷ್ಟೆಲ್ಲಾ ಯಾಕೆ: ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಒತ್ತಡವನ್ನು ತಗ್ಗಿಸಲು ಮಾಡಿದ ಸರಳ ಉಪಾಯವಿದು.ವಾಯು ಮಾಲಿನ್ಯ, ಶಬ್ದಮಾಲಿನ್ಯ ತಡೆಗೆ ಸಹಕರಿಸಿ ಎಂದು ದೊಡ್ಡ ದೊಡ್ಡ ಪದ ಬಳಸಿ ಪರಿಸರ ಸಂರಕ್ಷಣೆಗೆ ಸಾರ್ವಜನಿಕರನ್ನು ವಿಶೇಷವಾಗಿ ಟೆಕ್ಕಿಗಳನ್ನು ತೊಡಗಿಸಿಕೊಳ್ಳುವಂತೆ ಮಾಡುವುದು ಸುಲಭವಾಗದ ಕಾರಣ, ಬಸ್ ದಿನ ಎಂದು ಹಬ್ಬ ಹರಿದಿನದಂತೆ ದಿನಗೊಂದು ಹೊಸ ಹೆಸರು ಕೊಟ್ಟು ಆಕರ್ಷಿಸುವುದು. ಇದರಿಂದ ಬಿಎಂಟಿಸಿಗೂ ಲಾಭ. ಪರಿಸರಕ್ಕೂ ಒಳ್ಳೆಯದು, ಕಂಗ್ರಾಟ್ಸ್ ಟು ಅಶೋಕ್, ನವರಸ ನಾಯಕ ಜಗ್ಗೇಶ್ ಅಂಡ್ ಟೀಮ್.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications