ಯಡ್ಡಿ ವಿರುದ್ಧ ಪೊಲೀಸ್ ಕಂಪ್ಲೇಂಟ್

ಕಲಬುರ್ಗಿಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಮ ಪ್ರಭು ಪಾಟೀಲ್ ಬ್ರಹ್ಮಾಪುರ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್, ಓರ್ವ ಮುಖ್ಯಮಂತ್ರಿಯಾಗಿ ಇಂಥ ಮಾತನಾಡುವುದು ಯಡಿಯೂರಪ್ಪನವರಿಗೆ ತರವಲ್ಲ. ಈ ಬಗೆಯ ಹೇಳಿಕೆಗಳು ಜನತೆಗೆ ಕಾನೂನನ್ನು ಕೈಗೆತ್ತಿಕೊಳ್ಳುವುದಕ್ಕೆ ಪ್ರಚೋದನೆ ನೀಡುತ್ತವೆ ಎಂದು ಹೇಳಿದರು.
ಎಲ್ಲರಿಗೂ ಮಾತನಾಡುವುದಕ್ಕೆ ಹಕ್ಕಿದೆ. ಆದರೆ ಮಾತನಾಡುವ ಹಕ್ಕನ್ನೇ ತುಳಿಯುವ ಯಡ್ಡಿ ಅವರ ಧೋರಣೆ ಪ್ರಜೆಗಳ ಸಂವಿಧಾನದತ್ತ ಹಕ್ಕುಗಳನ್ನು ಮರ್ದನ ಮಾಡುತ್ತವೆ ಎಂದು ಅವರು ಆರೋಪಿಸಿದರು.
ಸೋಮವಾರ ಗುಲಬರ್ಗಾದಲ್ಲಿ ಜರುಗಿದ ಆರೋಗ್ಯಶ್ರೀ ಯೋಜನೆ ಉದ್ಘಾಟನೆ ಮಾಡಿ ಮಾತನಾಡುವಾಗ ಬಿಎಸ್ ವೈ ಅವರು ವಿರೋಧಪಕ್ಷಗಳ ವಿರುದ್ಧ ಕೆಂಡ ಕಾರಿದ್ದರು. ತಮ್ಮ ವಿರುದ್ಧ ಪದೇಪದೇ ಟೀಕೆ ಮಾಡುವ ವಿರೋಧ ಪಕ್ಷದವರ ನಾಲಗೆಗಳನ್ನು ಕತ್ತರಿಸುವಂತೆ ತಮ್ಮ ಪಕ್ಷದವರಿಗೆ ಕರೆಕೊಟ್ಟರೆಂದು ವರದಿಯಾಗಿತ್ತು.
ಬೆಂಗಳೂರು ವರದಿ : ಮುಖ್ಯಮಂತ್ರಿಗಳ ಹೇಳಿದ 'ನಾಲಗೆ ಕತ್ತರಿಸಿ' ಹೇಳಿಕೆಯನ್ನು ವಿರೋಧಿಸಿ ಇಂದು ಪ್ರದೇಶ ಕಾಂಗ್ರೆಸ್ ನಾಯಕರು ನಗರದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಉಪಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತಿತರ ಮುಖಂಡರು ಮಹಾತ್ಮಾ ಗಾಂಧೀ ಪ್ರತಿಮೆ ಬಳಿ ಧರಣಿ ಮಾಡಿದರು. ಆನಂತರ ಸೀದಾ ರಾಜಭವನಕ್ಕೆ ತೆರಳಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಕಂಪ್ಲೇಂಟು ಕೊಟ್ಟರು.
ಶಿವಮೊಗ್ಗ ವರದಿ : ಬಿ.ಎಸ್.ಯಡಿಯೂರಪ್ಪ ಗುಲ್ಬರ್ಗಾದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ, "ನನ್ನ ವಿರುದ್ಧ ಯಾರಾದರೂ ಟೀಕೆ ಮಾಡಿದಲ್ಲಿ ಅವರ ನಾಲಿಗೆಯನ್ನು ಸೀಳಿ" ಎಂದು ಹೇಳಿಕೆ ನೀಡುವುದರ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹದಗೆಡಿಸಲು ಹೊರಟಿದ್ದಾರೆಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಗೋಪಿವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿರುವ .ಯಡಿಯೂರಪ್ಪ ಈ ರೀತಿ ನಾಲಿಗೆ ಸೀಳುತ್ತೇನೆ ಎಂದು ಬೆದರಿಕೆಯೊಡ್ಡುವುದು ಅವರ ಸ್ಥಾನಮಾನಕ್ಕೆ ಸರಿಹೊಂದುವುದಲ್ಲ. ಮುಖ್ಯಮಂತ್ರಿಯೊಬ್ಬ ಈ ರೀತಿ ಜೀವ ಬೆದರಿಕೆಯೊಡ್ಡುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಕ್ರಮ ಜರುಗಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ನ ನಗರಾಧ್ಯಕ್ಷ ರಂಗನಾಥ್, ಎನ್ಎಸ್ಯುಐ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ, ವಿಜಯಕುಮಾರ್, ಮಧುಸೂಧನ್, ರಂಜಿತ್, ಪ್ರಶಾಂತ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications