ಮೃತ್ಯುಂಜಯನಾಗಿ ಹೊರಬಂದ ಮಲ್ಲಯ್ಯ

ಬಹುಮಹಡಿ ಕಟ್ಟಡದ ಜೀವರಕ್ಷಣೆಯ ಕಾರ್ಯಾಚರಣೆ ಬುಧವಾರದಂದು ನಡೆಸಿದ ಅಗ್ನಿಶಾಮಕ ದಳ ಅವಶೇಷದಡಿಯಲ್ಲಿ ಬದುಕುಳಿದಿರುವ ಯಾವುದೇ ಸೂಚನೆ ಸಿಗದೇ ಕಾರ್ಯಚರಣೆಯನ್ನು ಅಂತಿಮಗೊಳಿಸಿದ್ದರು. ಆದರೆ ಇಂದು ನಡೆದ ಕಾರ್ಯಾಚರಣೆಯಲ್ಲಿ ಮಲಯ್ಯ ಅವರು ಪವಾಡ ಸದೃಶ್ಯ ರೀತಿಯಲ್ಲಿ ಸಾವಿನಿಂದ ಪಾರಾಗಿದ್ದಾರೆ. ರಾಮ ನಾಮ ಜಪ ದಿಂದ ಬದುಕಿದೆ . ಕುಡಿಯಲು ಬಿಂದಿಗೆ ನೀರಿತ್ತು ಅಷ್ಟೆ. ಎಲ್ಲಾ ದೇವರ ದಯೆ ಎಂದ ಮಲ್ಲಯ್ಯ, ಕಟ್ಟಡದ ಅವಶೇಷದಡಿಯಲ್ಲಿ ಇನ್ನೂ ಮೂರು ಮಂದಿ ಜೀವಂತವಾಗಿರುವ ಸಾಧ್ಯತೆಯಿದೆ ಎಂದಿದ್ದಾರೆ. ಮಹಿಳೆಯ ಶವವನ್ನು ಹೊರತೆಗೆಯಲಾಗಿದೆ. ಆದರೆ ಇದು ಮಲ್ಲಯ್ಯ ಅವರ ಪತ್ನಿ ನಾಗಮ್ಮ ಅವರ ಶವ ಎಂದು ಶಂಕೆ ವ್ಯಕ್ತವಾಗಿದೆ. ಇನ್ನುಳಿದವರ ಪತ್ತೆ ಕಾರ್ಯ ನಡೆದಿದೆ.
ಮಲ್ಲಯ್ಯನ ಪವಾಡ-ಸೋಮಶೇಖರ ರೆಡ್ಡಿ: ಬಳ್ಳಾರಿ ಕಟ್ಟಡ ಅವಶೇಷದಡಿಯಲ್ಲಿ ಕಳೆದ ಎಂಟು ದಿನಗಳವರೆಗೆ ಸಿಲುಕಿದ್ದ ಮಲ್ಲಯ್ಯ ಬದುಕಿ ಉಳಿದದ್ದು ನಿಜಕ್ಕೂ ಪವಾಡ ಎಂದು ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ ಕೆಲವರು ಜೀವಂತವಾಗಿರುವ ಸಾಧ್ಯತೆ ಇದ್ದಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ ಅವರು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿದರು.
ಜನವರಿ 26ರಂದು ಸಂಭವಿಸಿದ ಬಹುಮಹಡಿ ಕಟ್ಟಡ ದುರಂತದಲ್ಲಿ ಸುಮಾರು 27ಮಂದಿ ಸಾವನ್ನಪ್ಪಿದ್ದರು. ಮಂಗಳವಾರ ಅಂತಿಮ ಕಾರ್ಯಾಚರಣೆ ಎಂಬಂತೆ ಇಡೀ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು. ಪ್ರತಿದಿನ ಮೃತದೇಹಗಳನ್ನೇ ಹೊರತೆಗೆಯಲಾಗುತ್ತಿತ್ತು. ಅಲ್ಲದೇ, ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿದವರು ಸಾವನ್ನಪ್ಪಿರುವುದಾಗಿಯೇ ಎಲ್ಲರೂ ನಂಬಿದ್ದರು. ಆದರೆ ಪವಾಡ ಎಂಬಂತೆ ಇಂದು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮಲ್ಲಯ್ಯ ಎಂಬ ಕಾರ್ಮಿಕ ಜೀವಂತವಾಗಿ ಪತ್ತೆಯಾಗುವ ಮೂಲಕ ರಕ್ಷಣಾ ಸಿಬ್ಬಂದಿ ಸೇರಿದಂತೆ ಸಾರ್ಜಜನಿಕರು ಅಚ್ಚರಿಗೆ ಒಳಗಾಗುವಂತ ಘಟನೆ ನಡೆಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications