ತಿರುಪತಿ ರೈಲು ಚಾ.ನಗರಕ್ಕೂ ಬರಲಿದೆ!

ಚಾಮರಾಜನಗರ >> ನಂಜನಗೂಡು>> ಮೈಸೂರು>> ಬೆಂಗಳೂರು ಮಾರ್ಗವಾಗಿ ತಿರುಪತಿಗೆ ತೆರಳುವ ರೈಲಿಗೆ, ರೈಲ್ವೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ನಾಳೆ ಮಧ್ಯಾಹ್ನ 3ಗಂಟೆಗೆ ಹಸಿರು ನಿಶಾನೆ ತೋರಿಸಲಿದ್ದಾರೆಂದು ಚಾಮರಾಜನಗರ ಸಂಸದ ಧ್ರುವ ನಾರಾಯಣ್ ಹೇಳಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಮಧ್ಯಾಹ್ನ 1 .30 ಕ್ಕೆ ರೈಲ್ವೆ ನಿಲ್ದಾಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು ಧ್ರುವನಾರಾಯಣ, ಸಿದ್ದರಾಮಯ್ಯ ಮುಂತಾದವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇಜ್ಜತ್ ಮಾಸಿಕ ಪಾಸ್ ನ್ನು2500 ಮಂದಿಗೆ ವಿತರಿಸಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.












Click it and Unblock the Notifications